suddibindu.in
Koppala:ಕೊಪ್ಪಳ : ನನಗೆ ಮದುವೆ ಆಗುವ ಆಸೆಯಾಗಿದೆ. ದಯವಿಟ್ಟು ನನಗೆ ಕನ್ನೈ ಹುಡುಕಿಕೊಡಿ ಎಂದು ಯುವಕನೊಬ್ಬ ಜನಸ್ಪಂಧನಾ ಕಾರ್ಯಕ್ರಮದಲ್ಲಿ ಯುವಕನೊಬ್ಬ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಅಪರೂಪದ ಘಟನೆ ನಡೆದಿದೆ.
ಕೊಪ್ಪಳದ ಕನಕಗಿರಿ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ಯುವಕನೋರ್ವ ಮನವಿ ಸಲ್ಲಿಸಿದ್ದಾನೆ. ಕನಕಗಿರಿ ಪಟ್ಟಣದ 3 ನೇ ವಾರ್ಡಿನ ಗೌಡರ ಓಣಿಯ ಸಂಗಪ್ಪ ಎನ್ನುವ ಯುವಕ ನಾನು ಹತ್ತು ವರ್ಷಗಳಿಂದ ಮದುವೆಯಾಗಲು ಕನ್ಯೆ ಹುಡುಕುತ್ತಿದ್ದು, ನಾನು ರೈತ ಎನ್ನುವ ಕಾರಣಕ್ಕಾಗಿ ನನಗೆ ಯಾರೂ ಕನ್ಯೆ ಕೊಡುತ್ತಿಲ್ಲ. ನನ್ನಂತೆ ಕನಕಗಿರಿಯಲ್ಲಿ ನೂರಾರು ಯುವಕರು ಇದ್ದು ಕನ್ಯೆ ಸಿಗದೆ ಪರದಾಡುತ್ತಿದ್ದಾರೆ. ದಯವಿಟ್ಟು ನನಗೆ ಕನ್ಯೆ ಕೊಡ್ಸಿ ಸ್ವಾಮಿ ಎಂದು ಜಿಲ್ಲಾಧಿಕಾರಿ ನಲೀನ್ ಅತುಲ್ ಅವರಿಗೆ ಮನವಿ ಸಲ್ಲಿಸಿದ್ದಾನೆ.
ಇದನ್ನೂ ಓದಿ
- ಬಾವಿಗೆ ಬಿದ್ದ ಎರಡು ವರ್ಷದ ಬಾಲಕಿ ರಕ್ಷಣೆ
- ರಸ್ತೆ ಅಪಘಾತದಲ್ಲಿ ಶಾಸಕರ ಆಪ್ತ ಸಹಾಯಕ ದುರ್ಮರಣ
- ಆಡಳಿತ ಸುಧಾರಣೆ ಅಧ್ಯಕ್ಷ ಆರ್ ವಿ.ದೇಶಪಾಂಡೆ ಕ್ಷೇತ್ರದಲ್ಲಿ ಸುಧಾರಿಸದ ಆರೋಗ್ಯ ಸೇವೆ : 108 ಆಂಬುಲೆನ್ಸ್ ಸಿಗದೆ ಮಾಜಿ ಸೈನಿಕ್ ಸಾವು
ಈ ವೇಳೆ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ನಗು ನಗುತ್ತಲೆ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅವರು ಇದು ಯಾವ ಇಲಾಖೆಗೆ ಬರುತ್ತೆ ಎಂದು ಅಧಿಕಾರಿಗಳಿಗೆ ಕೇಳಿದ್ದು ಈ ಬಗ್ಗೆ ಪರಿಶೀಲನೆ ಮಾಡುವುದಾಗಿ ಡಿಸಿ ನಲೀನ್ ಅತುಲ್ ಸಂಗಪ್ಪನ ರೈತ ಯುವಕನಿಗೆ ಬರವಸೆ ನೀಡಿದ್ದಾರೆ.






