suddibindu.in
ಹಾವೇರಿ : ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೆಳ್ಳಂ ಬೆಳಿಗ್ಗೆ 13ಮಂದಿ ಮೃತಪಟ್ಟಿರುವ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟಿರುವವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರಾಗಿದ್ದು, ಇವರೆಲ್ಲಾರು ಬೆಳಗಾವಿ ಜಿಲ್ಲೆಯ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ಅಲ್ಲಿಂದ ವಾಪಸ್ ಭದ್ರಾವತಿಗೆ ಹೋಗುತ್ತಿರುವಾಗ ಘನಘೋರ ಅಪಘಾತ ನಡೆದಿದೆ.ತಡ ರಾತ್ರಿ ಮೂರು ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಮೃತದೇಹಗಳು ಸಹ ಗುರುತು ಸಿಗದ ಪರಿಸ್ಥಿತಿ ಉಂಟಾಗಿದೆ
ಇದನ್ನೂ ಓದಿ
- ಯಶಸ್ವಿನಿ ಆರೋಗ್ಯ ಕಾರ್ಡ್ ಹಗರಣ : ಕಾರ್ಡ್ ನವೀಕರಣಕ್ಕೆ ಜನರ ಹಿಂದೇಟು
- ಗೋವನ್ನು ಕೊಂದು ಮಾಂಸ ಕಳವು : ಹೊನ್ನಾವರದಲ್ಲಿ ಘಟನೆ
- Dandeli/ದಾಂಡೇಲಿಯ ಶ್ರೇಯಸ್ ಪೇಪರ್ ಮಿಲ್ನಲ್ಲಿ ಭಾರೀ ಅಗ್ನಿ ಅವಘಡ: ಜನವಸತಿ ಪ್ರದೇಶಕ್ಕೂ ಬೆಂಕಿ ವ್ಯಾಪಿಸುವ ಭೀತಿ
ವಾಹನದಲ್ಲಿ ಸಿಲುಕಿರುವ ಎಲ್ಲಾ ಮೃತದೇಹವನ್ನ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಟ್ಟು ಹೊರ ತೆಗೆದಿದ್ದಾರೆ.






