suddibindu.in
ಹೊನ್ನಾವರ : ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹೊಸಪಟ್ಟಣ ಕ್ರಾಸ್ ಬಳಿ ನಡೆದಿದೆ.
ಪಾರ್ಶ್ವವಾಯು ಪೀಡಿತೆ ಕಮಲಾ ಪಟಗಾರ, ಸಂಬಂಧಿಕರು ಮತ್ತು ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಪಾರ್ಶ್ವವಾಯು ಪೀಡಿತ ರೋಗಿ ಓರ್ವನನ್ನ ಕುಮಟಾದಿಂದ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಹೊನ್ನಾವರ ತಾಲೂಕಿನ ಹೊಸ ಪಟ್ಟಣ ಕ್ರಾಸ್ ಬಳಿ ಹೆದ್ದಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿದೆ.
ಇದನ್ನೂ ಓದಿ
- ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ: ಹುಟ್ಟುಹಬ್ಬ–ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ
- ಕುಮಟಾ ಸಮೀಪ KSRTC ಬಸ್–ಪಿಕ್ಅಪ್ ವಾಹನ ಡಿಕ್ಕಿ: ಚಾಲಕ ಗಂಭೀರ
- ದೇವರ ತಟ್ಟೆ ಹಣಕ್ಕೆ ಅರ್ಚಕರ ಕಿತ್ತಾಟ : ಭಕ್ತರ ಎದುರೇ ಗಲಾಟೆ, ವಿಡಿಯೋ ವೈರಲ್
ಗಾಯಾಳುಗಳನ್ನ ಇನ್ನೊಂದು ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







