suddibindu.in
ಹೊನ್ನಾವರ : ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹೊಸಪಟ್ಟಣ ಕ್ರಾಸ್ ಬಳಿ ನಡೆದಿದೆ.
ಪಾರ್ಶ್ವವಾಯು ಪೀಡಿತೆ ಕಮಲಾ ಪಟಗಾರ, ಸಂಬಂಧಿಕರು ಮತ್ತು ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಪಾರ್ಶ್ವವಾಯು ಪೀಡಿತ ರೋಗಿ ಓರ್ವನನ್ನ ಕುಮಟಾದಿಂದ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಹೊನ್ನಾವರ ತಾಲೂಕಿನ ಹೊಸ ಪಟ್ಟಣ ಕ್ರಾಸ್ ಬಳಿ ಹೆದ್ದಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿದೆ.
ಇದನ್ನೂ ಓದಿ
- ಯಲ್ಲಾಪುರ ಬಳಿ ಅಪಘಾತ : ಸಾವಿನ ಸಂಖ್ಯೆ ಏಳಕ್ಕೆ ಏರಿಕೆ, ಶಾಸಕ ಶಿವರಾಮ ಹೆಬ್ಬಾರ್ ಆಸ್ಪತ್ರೆಗೆ ಭೇಟಿ ನೀಡಿ
- Breaking/ ಭೀಕರ ಅಪಘಾತ: ಲಾರಿ–ಕ್ರೂಸರ್ ಡಿಕ್ಕಿ, ಆರು ಮಂದಿ ದುರ್ಮರಣ
- ಕಂಪೌಂಡ್ ಗೋಡೆ ಕುಸಿದು ಮನೆಗೆ ಹಾನಿ : ಸಂತ್ರಸ್ತ ಕುಟುಂಬಕ್ಕೆ ಬಿಜೆಪಿ ಮುಖಂಡರ ಭೇಟಿ,ಆರ್ಥಿಕ ನೆರವು
ಗಾಯಾಳುಗಳನ್ನ ಇನ್ನೊಂದು ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




