suddibindu.in
ಹೊನ್ನಾವರ : ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹೊಸಪಟ್ಟಣ ಕ್ರಾಸ್ ಬಳಿ ನಡೆದಿದೆ.
ಪಾರ್ಶ್ವವಾಯು ಪೀಡಿತೆ ಕಮಲಾ ಪಟಗಾರ, ಸಂಬಂಧಿಕರು ಮತ್ತು ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಪಾರ್ಶ್ವವಾಯು ಪೀಡಿತ ರೋಗಿ ಓರ್ವನನ್ನ ಕುಮಟಾದಿಂದ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಹೊನ್ನಾವರ ತಾಲೂಕಿನ ಹೊಸ ಪಟ್ಟಣ ಕ್ರಾಸ್ ಬಳಿ ಹೆದ್ದಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿದೆ.
ಇದನ್ನೂ ಓದಿ
- ಬಿಜೆಪಿ ತಾಲೂಕು ಅಧ್ಯಕ್ಷರ ವಿರುದ್ಧ ಭೂ ಒತ್ತುವರಿ ಆರೋಪ : ಕ್ರಮಕ್ಕೆ ಆಗ್ರಹಿಸಿ ತಹಶಿಲ್ದಾರರಿಗೆ ಮನವಿ
- ನಕಲಿ ಪೊಲೀಸರ ಕಳ್ಳಾಟ: ಯಲ್ಲಾಪುರದಲ್ಲಿ ಭಾರಿ ಸೈಬರ್ ವಂಚನೆ
- ಭಾರೀ ಮಳೆಗೆ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು
ಗಾಯಾಳುಗಳನ್ನ ಇನ್ನೊಂದು ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






