suddibindu.in
ಹೊನ್ನಾವರ : ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹೊಸಪಟ್ಟಣ ಕ್ರಾಸ್ ಬಳಿ ನಡೆದಿದೆ.
ಪಾರ್ಶ್ವವಾಯು ಪೀಡಿತೆ ಕಮಲಾ ಪಟಗಾರ, ಸಂಬಂಧಿಕರು ಮತ್ತು ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಪಾರ್ಶ್ವವಾಯು ಪೀಡಿತ ರೋಗಿ ಓರ್ವನನ್ನ ಕುಮಟಾದಿಂದ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ಹೊನ್ನಾವರ ತಾಲೂಕಿನ ಹೊಸ ಪಟ್ಟಣ ಕ್ರಾಸ್ ಬಳಿ ಹೆದ್ದಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿದೆ.
ಇದನ್ನೂ ಓದಿ
- ವಾಯುವ್ಯ ಕರ್ನಾಟಕ ಸಾರಿಗೆ ಶಿರಸಿ ವಿಭಾಗದಲ್ಲಿ ಚಾಲಕರ ನೇಮಕಾತಿಗೆ ಅರ್ಜಿ ಆಹ್ವಾನ
- 21 ವರ್ಷ ಪೂರೈಸಿದ ಆರ್.ವಿ. ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ : ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಕ್ರಾಂತಿ.!
- ಮಾಧ್ಯಮ ಕ್ಷೇತ್ರದಲ್ಲಿ ಭಾರೀ ಬದಲಾವಣೆ ಆಗಲಿದೆ : ಮಹಾಬಲ ಸೀತಾಳಬಾವಿ
ಗಾಯಾಳುಗಳನ್ನ ಇನ್ನೊಂದು ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.