suddibindu.in
ಕಾರವಾರ :ಮನೆಯಲ್ಲಿ ಯಾರು ಇಲ್ಲದ ವೇಳೆ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂ ನಗದು ಹಾಗೂ ಬಂಗಾರ ಕಳ್ಳತನ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗದ ನಿವೃತ್ತ ಪೊಲೀಸ್ ಒಬ್ಬರ ಮನೆಯಲ್ಲಿ ನಡೆದಿದೆ.
ಕೋಡಿಭಾಗದ ಮಾರುತಿ ಅಪ್ಪು ನಾಯಕ ಅವರ ಮನೆ ಕಳ್ಳತವಾಗಿದೆ.ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಮುಂದಿನ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳ ಮನೆಯ ಕಪಾಟಿನಲ್ಲಿದ್ದ ಎರಡು ಲಕ್ಷ ನಗದು ಹಾಗೂ 15ತೊಲೆ ಬಂಗಾರ ಕಳ್ಳತನ ಮಾಡಲಾಗಿದೆ.
ಇದನ್ನೂ ಓದು
- ಡ್ರಾಮಾ ಜೂನಿಯರ್ಸ್ ಸೂರಜ್ ಅಜ್ಜಿ ವಿಧಿವಶ: ಜನಮನ ಗೆದ್ದ ‘ರೀಲ್ಸ್ ಅಜ್ಜಿ’ ಇನ್ನು ನೆನಪು ಮಾತ್ರ
- ಗೋಪಾಲಕೃಷ್ಣ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪ್ರಭಾವಿ ವ್ಯಕ್ತಿಯ ಹೆಸರು ಪರೋಕ್ಷವಾಗಿ ಇಂಗಿತ ವ್ಯಕ್ತಪಡಿಸಿದ ನಾಯಕ”
- ಉಪಚುನಾವಣೆಗೂ ಸಿಎಂ ಸ್ಥಾನಕ್ಕೂ ಸಂಬಂಧವಿಲ್ಲ: ಸಿಎಂ ಸ್ಪಷ್ಟನೆ
ಘಟನಾ ಸ್ಥಳಕ್ಕೆ ಶ್ವಾನ ದಳ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.ಈ ಬಗ್ಗೆ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




