Suddibindu.in
ಜೊಯಿಡಾ: ಪತ್ರಕರ್ತರು ತೆರಳುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟವಾದ(bomb) ಘಟನೆ ಉತ್ತರಕನ್ನಡ ಜಿಲ್ಲೆಯ ಜೊಯಿಡಾದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಅಂದಹಾಗೆ, ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಆಗಮಿಸುತ್ತಿದ್ದ ಪತ್ರಕರ್ತರ ಕಾರಿನಡಿ ನಾಡಬಾಂಬ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ
- ರೌಡಿಶೀಟರ್ಗಳ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿತ : ಮುರುಡೇಶ್ವರದಲ್ಲಿ ತಡರಾತ್ರಿ ಘಟನೆ
- ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಲು ರೂಪಾಲಿ ನಾಯ್ಕ ಕರೆ
- ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೌನ ಮುರಿದ ಮಂಕಾಳ ವೈದ್ಯ; ಸಿಎಂ ಕರೆ ಬಗ್ಗೆ ಬಿಚ್ಚಿಟ್ಟ ಸತ್ಯ
ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯರ್ ಹತ್ತಿ ಸ್ಫೋಟ ಸಂಭವಿಸಿದೆ. ಜೊಯಿಡಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.




