suddibindu.in
ಬೆಂಗಳೂರು: ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಮರು ನಿಯೋಜನೆ ಮಾಡಿ ರಾಜ್ಯ ಆದೇಶಿಸಿದೆ.
ಲೋಕಸಭೆ ಚುನಾವಣೆ ವೇಳೆ ವರ್ಗಾವಣೆಗೊಂಡಿದ್ದ ಹೇಮಂತ್ ನಿಂಬಾಳ್ಕರ್ ಅವರು ಮೂರು ತಿಂಗಳಿನಿಂದಲೂ ಯಾವುದೇ ಹುದ್ದೆಯಲ್ಲಿ ಇರಲಿಲ್ಲ. ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಡಾ. ಅಂಜಲಿ ನಿಂಬಾಳ್ಕರ್ ಅವರು ಲೋಕಸಭಾ ಚುನಾವಣೆಯಲ್ಲಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರಿಂದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗ ಮಾಡಲಾಗಿತ್ತು
ಈ ವರೆಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರೆಸಲಾಗಿದ್ದು, ಹೇಮಂತ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ
- ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕನಿಗೆ ಸಚಿವ ಮಂಕಾಳ್ ವೈದ್ಯರ ಭರವಸೆ :ಸ್ಪರ್ಶ ಆಸ್ಪತ್ರೆಗೆ ಭೇಟಿ
- Murudeshwar/ಮುರುಡೇಶ್ವರ ಸಮುದ್ರದಲ್ಲಿ ಭಾರೀ ಅಲೆಗೆ ಸಿಲುಕಿದ್ದ ಬೆಳಗಾವಿ ಪ್ರವಾಸಿಗನ ರಕ್ಷಣೆ: ಲೈಫ್ಗಾರ್ಡ್ಗಳ ಸಾಹಸಮಯ ಕಾರ್ಯಾಚರಣೆ
- Bhatkal/ಭಟ್ಕಳದಲ್ಲಿ ಪೊಲೀಸರ ಭರ್ಜರಿ ದಾಳಿ: 1.38 ಲಕ್ಷ ಮೌಲ್ಯದ ನಿಷೇಧಿತ ಇ-ಸಿಗರೇಟ್ ವಶ : ಆರೋಪಿ ಬಂಧನ
ಹೇಮಂತ್ ನಿಂಬಾಳ್ಕರ್ ಅವರು ಕಳೆದ ಒಂದು ವರ್ಷದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ .ಅವರಿಗೆ ಯಾವುದೇ ಹುದ್ದೆ ಸೂಚಿಸಿರದ ಕಾರಣ ಮೂರು ತಿಂಗಳಿನಿಂದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿಯೇ ಇದ್ದರು.





