suddibindu.in
ಕಾರವಾರ: ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು,ಉತ್ತರಕನ್ನಡ ಎಸ್ಪಿ ಆಗಿದ್ದ ಡಾ. ವಿಷ್ಣುವರ್ಧನ್ ಅವರನ್ನ ಸಹ ವರ್ಗಾವಣೆ ಮಾಡಲಾಗಿದೆ.
ಉತ್ತರಕನ್ನಡ ಹಾಲಿ ಎಸ್ಪಿ ಆಗಿದ್ದ ವಿಷ್ಣುವರ್ಧನ್ ಅವರನ್ನ ಮೈಸೂರಿಗೆ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ನಾರಾಯಣ್ ಎಂ ಅವರನ್ನ ನೇಮಕ ಮಾಡಲಾಗಿದೆ. ಇವರು 2012ರಲ್ಲಿ ಭಟ್ಖಳ ಡಿವೈಎಸ್ಪಿ ಆಗಿ ಕಾರ್ಯ ನಿರ್ವಹಿಸಿದರು.. ಈಗ ಉತ್ತರಕನ್ನಡ ಎಸ್ಪಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ವರ್ಗಾವಣೆಗೊಂಡ IPS ಅಧಿಕಾರಿಗಳ ವಿವರ
ವಿಷ್ಣುವರ್ಧನ್ : ಎಸ್ಪಿ ಮೈಸೂರು ಜಿಲ್ಲೆ,ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ. ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಛೇರಿ) ಸಿಕೆ ಬಾಬಾ: ಎಸ್ಪಿ ಬೆಂಗಳೂರು ಗ್ರಾಮಾಂತರ.ಎನ್ . ಸುಮನ್ ಡಿ ಪೆನ್ನೆಕರ್ : ಎಸ್ ಪಿ, ಬಿಎಂಟಿಎಫ್.ಸಿ.ಬಿ ರಿಷ್ಯಂತ್: ಎಸ್ ಪಿ ವೇರ್ ಲೆಸ್ ನಾಗೇಶ್ ಡಿ ಎಲ್ : ಡಿಸಿಪಿ, ಸಿ ಎ ಆರ್ ಹೆಡ್ ಕ್ವಾರ್ಟಸ್ಬೆಂ ಗಳೂರು ನಗರ . ಪದ್ಮನಿ ಸಾಹೋ :ಡಿಸಿಪಿ ಆಡಳಿತ, ಬೆಂಗಳೂರು ನಗರ. ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ. ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ. ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ. ಡಾ ಶೋಭಾ ರಾಣಿ ವಿ.ಜೆ. ಎಸ್ ಪಿ .ಬಳ್ಳಾರಿ ಜಿಲ್ಲೆ. ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ. ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ. ಕುಶಾಲ್ ಚೌಕ್ಸಿ: ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ. ಮಹಾನಿಂಗ್ ನಂದಗಾವಿ ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ ಚನ್ನಬಸವಣ್ಣ: ಎಐಜಿಪಿ, (ಆಡಳಿತ) ಡಿಜಿ ಕಛೇರಿ. ಲಾಭೂರಾಮ್ : ಐಜಿಪಿ ಕೇಂದ್ರ ವಲಯ ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ) ಡಾ.ಕೆ ತ್ಯಾಗರಾಜನ್ : ಐಜಿಪಿ,ಐಎಸ್ ಡಿ. ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್. ಬಿ ರಮೇಶ್ : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ . ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ ಸಾರ ಫಾತಿಮಾ: ಡಿಸಿಪಿ ಆಗ್ನೆಯ ವಿಭಾಗ, ಬೆಂಗಳೂರು ನಗರ.
ಇದನ್ನೂ ಓದಿ