www.suddibindu.in
ಶಿರಸಿ : ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಸ್ನಲ್ಲಿದ್ದ ಸುಮಾರು 25ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ನಗರದ ಕುಮಟಾ ರಸ್ತೆಯಲ್ಲಿ ನಡೆದಿದೆ.

ಈ ಬಸ್ಸು ಮುರುಡೇಶ್ವರದಿಂದ ಶಿರಸಿ ಮಾರ್ಗವಾಗಿ ಹುಬ್ಬಳ್ಳಿ ಮೂಲಕ ಅಥಣಿಗೆ ಚಲಿಸುತ್ತಿದ್ದ ವೇಳೆ ಬೆಂಕಿ ಶಿರಸಿ ನಗರದಲ್ಲಿ ಬಸ್ ಹಿಂಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಪ್ರಯಾಣಿಕರು ಒಂದು ಕ್ಷಣ ಭಯಭೀತರಾಗಿದ್ದು, ತಕ್ಷಣ ಬಸ್ ಚಾಲಕ ಸ್ಥಳದಲ್ಲೇ ಬಸ್ ನಿಲ್ಲಿಸಿದ್ದು, ತಕ್ಷಣ ಬಸ್ ನಲ್ಲಿದ್ದ ಪ್ರಯಾಣಿಕರು ಬಸ್ ಇಳಿದಿದ್ದು, ಇದರಿಂದಾಗಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರು ಬಸ್ ನಿಂದ ಕೇಳಗೆ ಇಳಿಯುತ್ತಿದ್ದಂತೆ ಹಿಂಬದಿ ಟೈಯರ್ ಸ್ಪೋಟಗೊಂಡಿದೆ.
ಇದನ್ನೂ ಓದಿ
- ದಿಕ್ಕು ತಪ್ಪಿದ ರಾಜ್ಯ ಬಿಜೆಪಿಗೆ (BJP) ಸಂಘ ಪರಿವಾರದ ಹೊಸ ಪ್ಲ್ಯಾನ್?
- ಸುಚಿತ್ರ ಸೌಂದರ್ಯಕ್ಕೆ ಸೋತ ಜ್ಯೋತಿಷಿ..? ಮೊದಲ ಭೇಟಿಯಲ್ಲೇ 35 ಸಾವಿರ ಸುರಿದ ಕಮಲಾಕರ ಭಟ್..!
- ಸುಚಿತ್ರಾ ಯಾರು? ಸುರೇಖಾ ಯಾರು? ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಸ್ಫೋಟಕ ಸತ್ಯಗಳು ಒಂದೊಂದಾಗಿ ಬಹಿರಂಗ!
ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು,ಪ್ರಯಾಣಿಕರನ್ನ ಬೇರೆ ಬಸ್ ನಲ್ಲಿ ಕಳುಹಿಸಲಾಗಿದೆ.





