Three seriously injured in leopard attack
suddibindu.in
leopard attack|ರಾಜಚೂರು: ದೇವದುರ್ಗ ತಾಲ್ಲೂಕಿನ ಕುಮದಾಳ ಗ್ರಾಮದಲ್ಲಿ ಚಿರತೆಯೊಂದು (leopard) ಪ್ರತ್ಯಕ್ಷವಾಗಿದ್ದು ಮೂವರ ಮೇಲೆ ದಾಳಿ (Attack) ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ.
ರಾಯಚೂರು (Raichur) ಜಿಲ್ಲೆ ದೇವದುರ್ಗ (Devadurga) ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿ, ಏಕಾಏಕಿ ಮೂವರ ಮೇಲೆ ಚಿರತೆ ದಾಳಿ, ಗಂಭೀರ ಗಾಯಗೊಳಿಸಿದೆ. ಚಿರತೆ ಪ್ರತ್ಯಕ್ಷ ಸ್ಥಳಕ್ಕೆ ಪೊಲೀಸ್ (police) ಹಾಗೂ ಅರಣ್ಯ (Forest) ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನೂ ಗಾಯಗೊಂಡ, ಮಲ್ಲಣ್ಣ ಕಮದಾಳ, ರಂಗನಾಥ ಕಮದಾಳ, ಮೇಶ ಕಮದಾಳ ಮೂವರನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ಇದನ್ನೂ ಓದಿ
- ಪತಿಯ ಉಸಿರು ತೆಗದ ಪತ್ನಿ, ಉಸಿರಿಗಾಗಿ ಹೋರಾಡಿದ ಮಗ…ಬೆಡ್ ಮೇಲೆ ಹಾಯಾಗಿ ಮೊಬೈಲ್ ನೋಡುತ್ತಿದ್ದ ‘ಡಾಕ್ಟರ್ಮ್ಮಾ’ “ಇವಳೆಂಥ ತಾಯಿ..?
- Weather-Alert- ಮಳೆಗಾಲದಲ್ಲೇ ಗರಿಷ್ಠ ತಾಪಮಾನ ಏರಿಕೆ: ಹವಾಮಾನ ಇಲಾಖೆ ಎಚ್ಚರಿಕೆ
- ಮುರುಡೇಶ್ವರ ಬಳಿ ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು
ಜಮೀನಿಗೆ ತೆರಳಿದ ವೇಳೆ ಚಿರತೆ ದಾಳಿ ಮಾಡಿದ ಹಿನ್ನೆಲೆ, ಕಮದಾಳು ಸೇರಿದಂತೆ ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕೋಡಲೆ ಕ್ರಮಕೈಗೊಂಡು ಚಿರತೆ ಹಿಡಿದು ಆತಂಕ ದೂರ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.




