Three seriously injured in leopard attack
suddibindu.in
leopard attack|ರಾಜಚೂರು: ದೇವದುರ್ಗ ತಾಲ್ಲೂಕಿನ ಕುಮದಾಳ ಗ್ರಾಮದಲ್ಲಿ ಚಿರತೆಯೊಂದು (leopard) ಪ್ರತ್ಯಕ್ಷವಾಗಿದ್ದು ಮೂವರ ಮೇಲೆ ದಾಳಿ (Attack) ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ.
ರಾಯಚೂರು (Raichur) ಜಿಲ್ಲೆ ದೇವದುರ್ಗ (Devadurga) ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿ, ಏಕಾಏಕಿ ಮೂವರ ಮೇಲೆ ಚಿರತೆ ದಾಳಿ, ಗಂಭೀರ ಗಾಯಗೊಳಿಸಿದೆ. ಚಿರತೆ ಪ್ರತ್ಯಕ್ಷ ಸ್ಥಳಕ್ಕೆ ಪೊಲೀಸ್ (police) ಹಾಗೂ ಅರಣ್ಯ (Forest) ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನೂ ಗಾಯಗೊಂಡ, ಮಲ್ಲಣ್ಣ ಕಮದಾಳ, ರಂಗನಾಥ ಕಮದಾಳ, ಮೇಶ ಕಮದಾಳ ಮೂವರನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ಇದನ್ನೂ ಓದಿ
- ಆರ್ಟಿಐ ಹೆಸರಿನಲ್ಲಿ ಕೋಟಿ ಹಣದ ಬೇಡಿಕೆ: ಮುಂಡಗೋಡ-ಹುಬ್ಬಳ್ಳಿ ಗ್ಯಾಂಗ್ ಪೊಲೀಸ್ ಬಲೆಗೆ..!
- ಐದು ವರ್ಷ ಅಪಘಾತವಿಲ್ಲ.!ಭಟ್ಕಳದ ಚಾಲಕ ರಾಮಚಂದ್ರ ನಾಯ್ಕ ಅವರಿಗೆ ಬೆಳ್ಳಿ ಪದಕದ ಗೌರವ
- ನ್ಯಾಯ ಸಿಗದಿದ್ದರೆ ಬಸ್ಸ್ಟ್ಯಾಂಡ್ನಲ್ಲಿ ಧರಣಿ : ಆಟೋ ಚಾಲಕರಿಂದ ಎಚ್ಚರಿಕೆ
ಜಮೀನಿಗೆ ತೆರಳಿದ ವೇಳೆ ಚಿರತೆ ದಾಳಿ ಮಾಡಿದ ಹಿನ್ನೆಲೆ, ಕಮದಾಳು ಸೇರಿದಂತೆ ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕೋಡಲೆ ಕ್ರಮಕೈಗೊಂಡು ಚಿರತೆ ಹಿಡಿದು ಆತಂಕ ದೂರ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.






