ಸುದ್ದಿ,ಜಾಹೀರಾತಿಗಾಗಿ ಸಂಪರ್ಕಿಸಿ : 9916127361
www.suddibindu.in
ಬೆಂಗಳೂರು : ಚಲಿಸುತ್ತಿದ್ದ ಬಸ್ಗೆ ನಡು ರಸ್ತೆಯಲ್ಲಿಯೇ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಬಸ್ ಹೊತ್ತು ಉರಿದ ಘಟನೆ ನಗರದ ಎಂ ಜಿ ರಸ್ತೆಯಲ್ಲಿ ನಡೆದಿದೆ.
ಎಂ ಜಿ ರಸ್ತೆಯಲ್ಲಿ BMTC ಬಸ್ ಚಲಿಸುತ್ತಿರುವ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಬಸ್ ಹೊತ್ತಿ ಉರಿದಿದೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣ ಬಸ್ ಸ್ಥಳಲ್ಲೆ ನಿಲ್ಲಿಸಿದ್ದಾನೆ ಇದರಿಂದ ಬಸ್ನಲ್ಲಿ ಪ್ರಯಾಣಿಸುತ್ತಿದ್ದವರು ಬಸ್ನಿಂದ ಇಳಿದು ಪಾರಾಗಿದ್ದಾರೆ.
ಇದನ್ನೂ ಓದಿ
- ಅನಂತಕುಮಾರ ಹೆಗಡೆ ಬೆಂಬಲಿಗರಿಂದ ಹೆದ್ದಾರಿಯಲ್ಲೆ ಹಲ್ಲೆ
- ಪೊಲೀಸರ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು : ಎಸ್ಪಿ ಎಂ ನಾರಾಯಣ
- ಸಾತೊಡ್ಡಿ ಜಲಪಾತಕ್ಕೆ ಪ್ರವೇಶ ನಿಷೇಧ
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.