suddibindu.in
ಬಳ್ಳಾರಿ:ಪರಿಶಿಷ್ಟ ವರ್ಗದ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಇಂದು ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ರಾಜ್ಯ ವಾಲ್ಮೀಕಿ ನಿಗಮದ 94 ಕೋಟಿ ರೂಗಳ ಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ಬೆಂಗಳೂರಿನಿಂದ ಎಂಟು ಜನರ ಇಡಿ ಅಧಿಕಾರಿಗಳ ತಂಡ ಇಲ್ಲಿನ ನೆಹರು ಕಾಲೋನಿಯಲ್ಲಿರುವ ನಾಗೇಂದ್ರ ಅವರ ಮನೆಗೆ ಮುಂಜಾನೆಯೇ ಆಗಮಿಸಿ ಪರಿಶೀಲನೆ ನಡೆಸಿದೆ.
ಇದನ್ನೂ ಓದಿ
- ಮಹಿಳೆಯರ ಸ್ವಾವಲಂಬನೆಗೆ ರೋಟರಿ ನೆರವು ಶ್ಲಾಘನೀಯ : ಶಾಸಕ ಭೀಮಣ್ಣ ನಾಯ್ಕ
- ಚಾಂಪಿಯನ್ ಆಗಿ ಹೊರಹೊಮ್ಮಿದ ರಂಜನ್ ಚಾಲೆಂಜರ್ಸ್ ಭಟ್ಕಳ
- ಪಿಎಸ್ಐ ಖಾದರ್ ಬಾಷಾ ವಿರುದ್ಧ ಅಕ್ರಮ ದಂಡ ವಸೂಲಿ ಆರೋಪ : ಕ್ರಮಕ್ಕೆ ಮಂಜುನಾಥ ನಾಯ್ಕ ಆಗ್ರಹ
ನಾಗೇಂದ್ರ ಮತ್ತವರ ಮನೆಯವರು ಇಲ್ಲಿ ಇರದ ಕಾರಣ ಮನೆಯಲ್ಲಿನ ಸಿಬ್ಬಂದಿ ಮತ್ತು ಅವರ ಆಪ್ತರಿಂದ ಮಾಹಿತಿ ಸಂಗ್ರಹಿಸುತ್ತಿದೆ. ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ. ಸಿಆರ್ ಪಿಎಫ್ ಸಿಬ್ಬಂದಿಯಿಂದ ಭದ್ರತೆ ಪಡೆದು ದಾಳಿ ನಡೆಸಿದೆ.




