www.suddibindu.in
Karwar:ಕಾರವಾರ: ನಗರದ ಲಂಡನ್ ಸೇತುವೆಯ ಬಳಿ ಇಂದು ಶುಕ್ರವಾರ ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಕಾರುಗಳು ಜಖಂ ಗೊಂಡಿವೆ.
ನಗರದ ರಾಷ್ಟ್ರೀಯ ಹೆದ್ದಾರಿ 66 ರ ಟನಲ್ ಬಳಿ ಘಟನೆ ನಡೆದಿದೆ. ಬಿಣಗಾ ಕಡೆಯಿಂದ ಬರುವಾಗ ಲಂಡನ್ ಸೇತುವೆಯ ಬಳಿ ಗೋವಾ ರಾಜ್ಯದ ನೊಂದಣಿ ಇರುವ ಕಾರಿನ ಚಾಲಕ ಬ್ರೇಕ್ ಹಾಕಿದ್ದಾನೆ. ತಕ್ಷಣ ಅದರ ಹಿಂಬದಿ ಇದ್ದ ಕರ್ನಾಟಕ ನೊಂದಣಿಯ ತವೇರಾ ಕಾರಿನ ಚಾಲಕ ಕೂಡ ಬ್ರೇಕ್ ಹಾಕಿ ವೇಗವನ್ನು ಕಡಿಮೆ ಮಾಡಿದ್ದಾನೆ.
ಇದನ್ನೂ ಓದಿ
- ಮೀನುಗಾರ ಯುವಕನ ನಿಧನಕ್ಕೆ ರೂಪಾಲಿ ನಾಯ್ಕ ಸಂತಾಪ, ಹೆಚ್ಚಿ ಪರಿಹಾರಕ್ಕೆ ಆಗ್ರಹ
- RSS/ಆರ್ಎಸ್ಎಸ್ ಪ್ರಾಯೋಜಿತ ದುಷ್ಕರ್ಮಿಗಳ ಬೆದರಿಕೆ ಪದಗಳನ್ನ ಖಂಡಿಸುತ್ತೇವೆ:ನಿವೇದಿತ್ ಆಳ್ವಾ
- ಎಷ್ಟೇ ಅಪಪ್ರಚಾರ ಮಾಡಿದರೂ ಸ್ಫರ್ಧೆಯಿಂದ ಹಿಂದೆ ಸರಿಯುವುದಿಲ್ಲ: ಸರಸ್ವತಿ ಎನ್. ರವಿ
ಆದರೆ ಹಿಂದಿನಿಂದ ಬಂದ ತೆಲಂಗಾಣ ನೊಂದಣಿಯ ಮಹೇಂದ್ರಾ ಕಾರು ಚಾಲಕನ ನಿಯಂತ್ರಣಕ್ಕೆ ಸಗದೇ ತವೇರಾ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತವೇರಾ ಕಾರು ಮುಂದಿನ ಕಾರಿಗೆ ಬಡಿದು ಮೂರು ಕಾರುಗಳು ಕೂಡ ಜಖಂ ಆಗಿವೆ.ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕಾರವಾರದ ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.