www.suddibindu.in
Karwar:ಕಾರವಾರ: ನಗರದ ಲಂಡನ್ ಸೇತುವೆಯ ಬಳಿ ಇಂದು ಶುಕ್ರವಾರ ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಕಾರುಗಳು ಜಖಂ ಗೊಂಡಿವೆ.
ನಗರದ ರಾಷ್ಟ್ರೀಯ ಹೆದ್ದಾರಿ 66 ರ ಟನಲ್ ಬಳಿ ಘಟನೆ ನಡೆದಿದೆ. ಬಿಣಗಾ ಕಡೆಯಿಂದ ಬರುವಾಗ ಲಂಡನ್ ಸೇತುವೆಯ ಬಳಿ ಗೋವಾ ರಾಜ್ಯದ ನೊಂದಣಿ ಇರುವ ಕಾರಿನ ಚಾಲಕ ಬ್ರೇಕ್ ಹಾಕಿದ್ದಾನೆ. ತಕ್ಷಣ ಅದರ ಹಿಂಬದಿ ಇದ್ದ ಕರ್ನಾಟಕ ನೊಂದಣಿಯ ತವೇರಾ ಕಾರಿನ ಚಾಲಕ ಕೂಡ ಬ್ರೇಕ್ ಹಾಕಿ ವೇಗವನ್ನು ಕಡಿಮೆ ಮಾಡಿದ್ದಾನೆ.
ಇದನ್ನೂ ಓದಿ
- ಆರ್ಟಿಐ ಹೆಸರಿನಲ್ಲಿ ಕೋಟಿ ಹಣದ ಬೇಡಿಕೆ: ಮುಂಡಗೋಡ-ಹುಬ್ಬಳ್ಳಿ ಗ್ಯಾಂಗ್ ಪೊಲೀಸ್ ಬಲೆಗೆ..!
- ಐದು ವರ್ಷ ಅಪಘಾತವಿಲ್ಲ.!ಭಟ್ಕಳದ ಚಾಲಕ ರಾಮಚಂದ್ರ ನಾಯ್ಕ ಅವರಿಗೆ ಬೆಳ್ಳಿ ಪದಕದ ಗೌರವ
- ನ್ಯಾಯ ಸಿಗದಿದ್ದರೆ ಬಸ್ಸ್ಟ್ಯಾಂಡ್ನಲ್ಲಿ ಧರಣಿ : ಆಟೋ ಚಾಲಕರಿಂದ ಎಚ್ಚರಿಕೆ
ಆದರೆ ಹಿಂದಿನಿಂದ ಬಂದ ತೆಲಂಗಾಣ ನೊಂದಣಿಯ ಮಹೇಂದ್ರಾ ಕಾರು ಚಾಲಕನ ನಿಯಂತ್ರಣಕ್ಕೆ ಸಗದೇ ತವೇರಾ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತವೇರಾ ಕಾರು ಮುಂದಿನ ಕಾರಿಗೆ ಬಡಿದು ಮೂರು ಕಾರುಗಳು ಕೂಡ ಜಖಂ ಆಗಿವೆ.ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕಾರವಾರದ ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.







