suddibindu.in
ಶಿವಮೊಗ್ಗ : ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ..
ಕಾರ್ತಿಕ್ ಎಸ್ (19) ಮೃತಪಟ್ಟ ಯುವಕನಾಗಿದ್ದಾನೆ. ಬೆಳಗಿನಜಾವ ಈ ಘಟನೆ ನಡೆದಿದೆ. ಯುವಕ ಮನೆ ಎದುರಿನಲ್ಲಿ ಮೂತ್ರಕ್ಕೆ ಹೋಗಿದ್ದಾನೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಶಾಕ್ ತಗುಲಿ ಯುವಕ ಬೇಲಿಯ ಮೇಲೆ ಬಿದ್ದಿದ್ದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾದರೂ ಯುವಕ ಬದುಕುಳಿಯಲಿಲ್ಲ.
ಇದನ್ನೂ ಓದಿ
- temple theft/ದೇವಸ್ಥಾನದ ಕಳ್ಳತನ ಪ್ರಕರಣ ಭೇದಿಸಿದ ಶಿರಸಿ ಗ್ರಾಮೀಣ ಪೊಲೀಸರು : ಇಬ್ಬರು ಆರೋಪಿತರ ಬಂಧನ
- ಕುಮಟಾ-ಬಳ್ಳಾರಿ ಬಸ್ ಪಲ್ಟಿ :49 ಪ್ರಯಾಣಿಕರಿಗೆ ಗಾಯ : ಗಾಯಾಳುಗಳು ಆಸ್ಪತ್ರೆಗೆ ದಾಖಲು
- ಬರ್ಗಿಯಲ್ಲಿ ತಪ್ಪಿದ್ದ ಮತ್ತೊಂದು ಬೆಂಕಿ ದುರಂತ
ಮೃತ ಯುವಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ.ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




