suddibindu.in
ಶಿವಮೊಗ್ಗ : ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ..
ಕಾರ್ತಿಕ್ ಎಸ್ (19) ಮೃತಪಟ್ಟ ಯುವಕನಾಗಿದ್ದಾನೆ. ಬೆಳಗಿನಜಾವ ಈ ಘಟನೆ ನಡೆದಿದೆ. ಯುವಕ ಮನೆ ಎದುರಿನಲ್ಲಿ ಮೂತ್ರಕ್ಕೆ ಹೋಗಿದ್ದಾನೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಶಾಕ್ ತಗುಲಿ ಯುವಕ ಬೇಲಿಯ ಮೇಲೆ ಬಿದ್ದಿದ್ದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾದರೂ ಯುವಕ ಬದುಕುಳಿಯಲಿಲ್ಲ.
ಇದನ್ನೂ ಓದಿ
- Education Department News/ಗೋದಾಮಿನಲ್ಲಿ ಅಕ್ಕಿ ಇದ್ದರೂ ಶಾಲೆಗಳಿಗೆ ಪೂರೈಕೆ ಇಲ್ಲ; ಬಿಸಿಯೂಟ ಸ್ಥಗಿತದ ಆತಂಕ
- ಕಾರವಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್; ಪೊಲೀಸ್, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
- ರೌಡಿಶೀಟರ್, ಮೀಟರ್ ಬಡ್ಡಿದಂದೆಕೋರರ ಮನೆಗಳ ಮೇಲೆ ಪೊಲೀಸ್ ದಾಳಿ; ಉತ್ತರಕನ್ನಡ ಜಿಲ್ಲೆಯ ಹಲವು ಕಡೆ ಕಾರ್ಯಾಚರಣೆ
ಮೃತ ಯುವಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ.ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




