suddibindu.in
ಶಿವಮೊಗ್ಗ : ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ..
ಕಾರ್ತಿಕ್ ಎಸ್ (19) ಮೃತಪಟ್ಟ ಯುವಕನಾಗಿದ್ದಾನೆ. ಬೆಳಗಿನಜಾವ ಈ ಘಟನೆ ನಡೆದಿದೆ. ಯುವಕ ಮನೆ ಎದುರಿನಲ್ಲಿ ಮೂತ್ರಕ್ಕೆ ಹೋಗಿದ್ದಾನೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಶಾಕ್ ತಗುಲಿ ಯುವಕ ಬೇಲಿಯ ಮೇಲೆ ಬಿದ್ದಿದ್ದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾದರೂ ಯುವಕ ಬದುಕುಳಿಯಲಿಲ್ಲ.
ಇದನ್ನೂ ಓದಿ
- ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೌನ ಮುರಿದ ಮಂಕಾಳ ವೈದ್ಯ; ಸಿಎಂ ಕರೆ ಬಗ್ಗೆ ಬಿಚ್ಚಿಟ್ಟ ಸತ್ಯ
- ಹಾಡುಹಗಲೇ ಗ್ರಾ.ಪಂ ಮಾಜಿ ಅಧ್ಯಕ್ಷನ ಶೂಟೌಟ್
- ಉತ್ತರಕನ್ನಡಕ್ಕೆ ಸಚಿವ ಸ್ಥಾನ ಸಿಗದಿರುವುದು ಬೇಸರದ ಸಂಗತಿ: ಪ್ರಸಾದ ಗಾಂವಕರ್
ಮೃತ ಯುವಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ.ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




