suddibindu.in
ಶಿವಮೊಗ್ಗ : ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ..
ಕಾರ್ತಿಕ್ ಎಸ್ (19) ಮೃತಪಟ್ಟ ಯುವಕನಾಗಿದ್ದಾನೆ. ಬೆಳಗಿನಜಾವ ಈ ಘಟನೆ ನಡೆದಿದೆ. ಯುವಕ ಮನೆ ಎದುರಿನಲ್ಲಿ ಮೂತ್ರಕ್ಕೆ ಹೋಗಿದ್ದಾನೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಶಾಕ್ ತಗುಲಿ ಯುವಕ ಬೇಲಿಯ ಮೇಲೆ ಬಿದ್ದಿದ್ದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾದರೂ ಯುವಕ ಬದುಕುಳಿಯಲಿಲ್ಲ.
ಇದನ್ನೂ ಓದಿ
- “ಐ ಲವ್ ಯು” ಅಂತಾ ಹೇಳುವುದು ಲೈಂಗಿಕ ಉದ್ದೇಶವಲ್ಲ/ಹೈಕೋರ್ಟ್
- ವಾಯುವ್ಯ ಕರ್ನಾಟಕ ಸಾರಿಗೆ ಶಿರಸಿ ವಿಭಾಗದಲ್ಲಿ ಚಾಲಕರ ನೇಮಕಾತಿಗೆ ಅರ್ಜಿ ಆಹ್ವಾನ
- 21 ವರ್ಷ ಪೂರೈಸಿದ ಆರ್.ವಿ. ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ : ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಕ್ರಾಂತಿ.!
ಮೃತ ಯುವಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ.ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.