www suddibindu.in
ಹುಬ್ಬಳ್ಳಿ : ಕುಡಿದ ಮತ್ತಿನಲ್ಲಿ ಮನೆಯಲ್ಲಿ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ವೇಳೆ ಸಮಯಕ್ಕೆ ಸರಿಯಾಗಿ ಬಂದ ಪೊಲೀಸರು ಕುಣಿಕೆಯಲ್ಲಿದ್ದ ವ್ಯಕ್ತಿಯ ಜೀವ ಉಳಿಸಿರುವ ಘಟನೆ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ ಸಂಭವಿಸಿದೆ.
ಡಿಆರ್ನ ಸಂಗನಗೌಡ ಅವರು ಚಲಾಯಿಸುತ್ತಿದ್ದ 112ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ ಹೆಂಬ್ಲಿ ಕೂಡಿಕೊಂಡು ನೆಲ್ಲಿಹರವಿ ಗ್ರಾಮದ 46 ವರ್ಷದ ಶಂಭುಲಿಂಗಯ್ಯ ಹುಲಸೋಗಿ ಎಂಬಾತನನ್ನ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ
- ರೂಪಾಲಿ.ನಾಯ್ಕ್ಗೆ ‘ಜನಮೆಚ್ಚಿದ ಮಹಿಳಾ ನಾಯಕಿ’ ಪ್ರಶಸ್ತಿ
- ಭಟ್ಕಳ ಹೆಡ್ ಕಾನ್ಸ್ಟೇಬಲ್ ದೀಪಕ್ ನಾಯ್ಕ್ಗೆ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕ
- ಹಸಿದ ಹೊಟ್ಟೆಗೆ ಊಟ ಕೇಳಿದ ಭಿಕ್ಷುಕನ ಮೇಲೆ ಹಲ್ಲೆ; ಕುಮಟಾದಲ್ಲಿ ಅಮಾನವೀಯ ಕೃತ್ಯ
ಪೊಲೀಸರ ಈ ಕಾರ್ಯಕ್ಕೆ ಕಲಘಟಗಿ ಠಾಣೆ ಇನ್ಸಪೆಕ್ಟರ್ ಶ್ರೀಶೈಲ ಕೌಜಲಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಕ್ಷಣೆಗೊಳಗಾದ ಶಂಭುಲಿಂಗಯ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ.




