suddibindu.in
ಕಾರವರ : ಐಆರ್ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಶಿರೂರು ಬಳಿ ಗುಡ್ಡಕುಸಿತವಾಗಿ ಹನ್ನೊಂದು ಮಂದಿಯನ್ನ ಬಲಿ ಪಡೆದ ಶಿರೂರು ಗುಡ್ಡ ಇನ್ನೂ ಅಪಾಯಕಾರಿಯಾಗಿದ್ದು,ಭಾರೀ ಪ್ರಮಾಣದಲ್ಲಿ ಕುಸಿತವಾಗಲಿದೆ ಎಂದು ಜಿಯೋಲಾಜಿಕಲ್ ತಜ್ಞರು ನಡೆಸಿರು ಸರ್ವೆಯಲ್ಲಿ ಬಹಿರಂಗವಾಗಿದೆ.
ಕಳೆದ ಏಳು ದಿನಗಳ ಹಿಂದೆ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಸೇರಿ 11ಮಂದಿ ಮಣ್ಣಿನ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದು, ಈಗಾಗಲೇ ಏಳು ಮಂದಿಯ ಶವ ಪತ್ತೆಯಾಗಿದ್ದು,ಇನ್ನೂ ನಾಲ್ವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಇದನ್ನೂ ಓದಿ
- SSLC ಪರೀಕ್ಷೆ ಬರೆದರೂ ‘ಗೈರು :ಪ್ರಾಧಿಕಾರದ ಎಡವಟ್ಟು
- SSLC ಫಲಿತಾಂಶ: ಕುಮಟಾದ ದಿಶಾಂತ್ ನಾಯ್ಕ ರಾಜ್ಯಕ್ಕೆ ದ್ವಿತೀಯ ಸ್ಥಾನ
- ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: 94.1% ಪಾಸ್, ದಕ್ಷಿಣ ಕನ್ನಡ ನಂ.1 ಉಡುಪಿ ದ್ವಿತೀಯ, ಉತ್ತರಕನ್ನಡಕ್ಕೆ 3ನೇ ಸ್ಥಾನ
ಗುಡ್ಡಕುಸಿತವಾದ ಬಳಿಕ ಜಿಯೋಲಾಜಿಕಲ್ ತಜ್ಞರ ತಂಡ ಗುಡ್ಡಕುಸಿತವಾದ ಶಿರೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿನ ಮಣ್ಣು ಹಾಗು ಕಲ್ಲುಗಳನ್ನ ಪರೀಕ್ಷೆಗಾಗಿ ತೆಗೆದುಕೊಂಡು ಹೋಗಿದ್ದು,ಆ ಮಣ್ಣಿನ ಪರೀಕ್ಷೆ ನಡೆಸಿದ ತಜ್ಞರನ್ನ ತಂಡ ಇದೀಗ ಇನ್ನೂ ಕೂಡ ಗುಡ್ಡಕುಸಿತವಾಗುವ ಬಗ್ಗೆ ವರದಿಯನ್ನ ನೀಡಿದ್ದು,ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರನ್ನ ಸ್ಥಳಕ್ಕೆ





