suddibindu.in
ಅಂಕೋಲಾ: ಕಳೆದ ಎಂಟುದಿನಗಳ ಹಿಂದೆ ಶಿರೂರು ಬಳಿ ಗುಡ್ಡಕುಸಿತವಾಗಿ ಹನ್ನೊಂದು ಜನ ಮೃತಪಟ್ಟಿದ್ದು ಇಂದು ಬೆಳಿಗ್ಗೆ ಓರ್ವ ಮಹಿಳೆಯ ಶವ ಗಂಗಾವಳಿ ನದಿಯ ಗಂಗೆಕೋಳ್ಳ ನದಿ ತೀರದಲ್ಲಿ ಪತ್ತೆಯಾಗಿದೆ.
ಶಿರೂರು ಗುಡ್ಡಕುಸಿತದಿಂದ ಗಂಗಾವಳಿ ನದಿಯ ಇನ್ನೊಂದು ಪಕ್ಕದಲ್ಲಿದ್ದ ಉಳುವರೆ ಗ್ರಾಮದ ಸುಮಾರು ಐದಕ್ಕೂ ಹೆಚ್ಚು ಮನೆಗಳು ನೆಲಸಮವಾಗಿ ಸಣ್ಣೀ ಗೌಡ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇನ್ನೂ ಹತ್ತಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು.
ಇದನ್ನೂ ಓದಿ
- ದಿಕ್ಕು ತಪ್ಪಿದ ರಾಜ್ಯ ಬಿಜೆಪಿಗೆ (BJP) ಸಂಘ ಪರಿವಾರದ ಹೊಸ ಪ್ಲ್ಯಾನ್?
- ಸುಚಿತ್ರ ಸೌಂದರ್ಯಕ್ಕೆ ಸೋತ ಜ್ಯೋತಿಷಿ..? ಮೊದಲ ಭೇಟಿಯಲ್ಲೇ 35 ಸಾವಿರ ಸುರಿದ ಕಮಲಾಕರ ಭಟ್..!
- ಸುಚಿತ್ರಾ ಯಾರು? ಸುರೇಖಾ ಯಾರು? ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಸ್ಫೋಟಕ ಸತ್ಯಗಳು ಒಂದೊಂದಾಗಿ ಬಹಿರಂಗ!
ನಾಪತ್ತೆಯಾಗಿದ್ದ ಸಣ್ಣೀ ಗೌಡ ಪತ್ತೆಗಾಗಿ ಕಳೆದ ಏಂಟು ದಿನಗಳಿಂದ ನಿರಂತರವಾಗಿ ಕಾರ್ಯಚರಣೆ ಮಾಡಲಾಗಿದ್ದು, ಇಂದು ಬೆಳಿಗ್ಗೆ ಆಕೆಯ ಶವ ಗಂಗೆಕೋಳ್ಳದ ನದಿ ತೀರದಲ್ಲಿ ಪತ್ತೆಯಾಗಿದೆ.ಸ್ಥಳಕ್ಕೆ ಸ್ಥಳೀಯ ಪೊಲೀಸರು,NDRF-SDRF ತಂಡಗಳು ಆಗಮಿಸಿದ್ದು ಮೃತ ದೇಹವನ್ನ ಹೊರ ತೆಗೆಯಲಾಗಿದೆ.







