suddibindu.in
ಕುಮಟಾ : ಪಟ್ಟಣದ ಹೊಸ ಹೆರವಟ್ಟಾದಲ್ಲಿ ಇಂದು (ಶುಕ್ರವಾರ) ಮಧ್ಯಾಹ್ನ 12.30ರ ಸುಮಾರಿಗೆ ಮನೆ ಮೇಲೆ ಮರ ಬಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.
ಹೊಸ ಹೆರವಟ್ಟಾದ ನಿವಾಸಿ ಗೋಧಾವರಿ ಗೋಪಾಲ ಭಂಡಾರಿ ಅವರ ಮನೆ ಇದಾಗಿದ್ದು, ಮಧ್ಯಾಹ್ನ ಮನೆ ಮೇಲೆ ಸಾಗವಾನಿ ಮರ ಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾಗಿದೆ. ಮನೆ ಹಿಂಬದಿ ಕೋಣೆಯೊಂದರ ಗೋಡೆ ಸಂಪೂರ್ಣ ಕುಸಿದಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಗೋಧಾವರಿ ಭಂಡಾರಿ ಅವರು ತೀರಾ ಬಡವರಾಗಿದ್ದು, ಮನೆ ಹಾನಿಯಿಂದಾಗಿ ಇದೀಗ ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಕುಮಟಾ ತಹಶೀಲ್ದಾರ ಕಚೇರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ.
ಇದನ್ನೂ ಓದಿ.
ಅನಾಹುತ ಸ್ಥಳಕ್ಕೆ ಪುರಸಭಾ ಸದಸ್ಯೆ ಪಲ್ಲವಿ ಮಡಿವಾಳ, ಜೆಡಿಎಸ್ ಪಕ್ಷದ ರಾಜ್ಯ ಮುಖಂಡ ಸೂರಜ್ ನಾಯ್ಕ ಸೋನಿ ಅವರು ಬಂದಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.