suddibindu.in
ಅಂಕೋಲಾ : ಉತ್ತರಕನ್ನಡ ಜಿಲ್ಲೆಯ ಶಿರೂರು ಗುಡ್ಡಕುಸಿತ ಘಟನೆಯಲ್ಲಿ ಹನ್ನೊಂದು ಮಂದಿ ಸಿಲುಕಿರುವ ಬಗ್ಗೆ ಜಿಲ್ಲಾಡಳಿತ ಅಧಿಕೃತ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಸಾಯಿ ಈಶ್ವರ ಗುರೂಜಿ ಘಟನೆಯಲ್ಲಿ ಸಾವನ್ನಪ್ಪಿರುವವರು ಹನ್ನೊಂದು ಮಂದಿಯಲ್ಲ 17ಮಂದಿ ಎನ್ನುವ ಬಗ್ಗೆ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ
ಉಡುಪಿಯ ದ್ವಾರಕಾಮಯಿ ಮಠದ ಸ್ವಾಮಿ ಆಗಿರುವ ಸಾಯಿ ಈಶ್ವರ ಗುರೂಜಿ ಎಂಬುವವರು ಇಂದು ಗುಡ್ಡಕುಸಿತವಾಗಿರುವ ಶಿರೂರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರು ಪೆಂಡೋಲಮ್ ಮತ್ತು ಎಲೆಕ್ಟ್ರಾನಿಕ್ ಸ್ಕ್ಯಾನಿಂಗ್ ಮೂಲಕ ಸ್ಥಳದಲ್ಲಿ ತಪಾಷಣೆ ನಡೆಸಿದ್ದಾರೆ.
ಇದನ್ನೂ ಓದಿ
- ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು; ಕುಮಟಾ ಕಡ್ಲೆ ಸಮುದ್ರ ತೀರದಲ್ಲಿ ದುರ್ಘಟನೆ
- ಮಾರಿ ಹೊರೆ ಸ್ಥಳಾಂತರ ವೇಳೆ ಗಲಾಟೆ; ವ್ಯಕ್ತಿಯ ಕುತ್ತಿಗೆ ಹಿಸುಕಿ ಕೊಲೆ ಯತ್ನ, ಕುಮಟಾ ಠಾಣೆಯಲ್ಲಿ ಪ್ರಕರಣ
- ಹೊನ್ನಾವರ ಬಂಗಾರದ ಆಭರಣ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹17.08 ಲಕ್ಷ ಮೌಲ್ಯದ ಚಿನ್ನ ಜಪ್ತಿ, ಇಬ್ಬರ ಬಂಧನ
ಘಟನೆಯಲ್ಲಿ 17ಮಂದಿ ಸಾವನ್ನಪ್ಪಿದ್ದು, ಇನ್ನೂ 9 ಮಂದಿಯ ದೇಹಗಳಿವೆ. ಇನ್ನೂ ಗಂಗಾವಳಿ ನದಿಯ 24 ಅಡಿ ಆಳದಲ್ಲಿ ಲಾರಿ ಇದೆ. ಅಲ್ಲೆ ಹತ್ತಿರದಲ್ಲಿ ಒಂದು ದೇಹ ಸಹ ಇದೆ ಎಂದು ಹೇಳಿದ ಸ್ವಾಮಿಜಿ ಇನ್ನೂ ಎಂಟು ದೇಹಗಳು ಗಂಗಾವಳಿ ನದಿಯಲ್ಲಿ ಇರುವುದಾಗಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.




