suddibindu.in
Karwar;ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿತಕ್ಕೆ ಸಂಬಂಧಿಸಿ(CM) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (uttara Kannada DC) ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.
ಇದನ್ನೂ ಓದಿ
- ರಾಜ್ಯದಲ್ಲಿ ಹವಾಮಾನ ಬದಲಾವಣೆ; ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
- ಜನಮನ ರಂಜಿಸಿದ ಬಿಎಲ್ ಈವೆಂಟ್ಸ್ ಮತ್ತು ಪ್ರೊಡಕ್ಷನ್ ರಸಮಂಜರಿ : ಕರಾವಳಿ–ಮಲೆನಾಡು ತಂಡದಿಂದ ಸಂಗೀತ ರಸದೌತಣ
- ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿ.ಕೆ.ಶಿವಕುಮಾರ್
ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.




