suddibindu.in
Karwar;ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿತಕ್ಕೆ ಸಂಬಂಧಿಸಿ(CM) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (uttara Kannada DC) ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.
ಇದನ್ನೂ ಓದಿ
- ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಲು ರೂಪಾಲಿ ನಾಯ್ಕ ಕರೆ
- ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೌನ ಮುರಿದ ಮಂಕಾಳ ವೈದ್ಯ; ಸಿಎಂ ಕರೆ ಬಗ್ಗೆ ಬಿಚ್ಚಿಟ್ಟ ಸತ್ಯ
- ಹಾಡುಹಗಲೇ ಗ್ರಾ.ಪಂ ಮಾಜಿ ಅಧ್ಯಕ್ಷನ ಶೂಟೌಟ್
ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.




