suddibindu.in
ಕುಮಟಾ : ತಾಲೂಕಿನ ಬಾಡ ಗ್ರಾಮದ ಜನತಾ ವಿದ್ಯಾಲಯದ ಹಿಂಬದಿಯಲ್ಲಿ ಚರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.
ಬಾಡ ಗ್ರಾಮದ ಜನತಾ ವಿದ್ಯಾಲಯದ ಹಿಂಬದಿಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ವಿಡಿಯೋ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ಗ್ರಾಮದೊಳಗೆ ಚಿರತೆ ನುಗ್ಗಿರುವುದನ್ನ ತಿಳಿದ ಬಾಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವ ಮಂಜುನಾಥ ನಾಯ್ಕ ಅವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ
- Road Accident/ಸ್ಕೂಟಿ ಸವಾರನ ತಲೆಯ ಮೇಲೆ ಚಲಿಸಿದ ಬಸ್ ; ಸ್ಥಳದಲ್ಲೇ ಸಾವು
- ರಸ್ತೆ ಬದಿಯಲ್ಲಿ ಚಿರತೆ ಮರಿ ಪ್ರತ್ಯಕ್ಷ : ಶಿರಸಿ ತಾಲೂಕಿನ ಖಾನನಗರದಲ್ಲಿ ಅಪರೂಪದ ದೃಶ್ಯ.!
- ಕುಮಟಾ ಎಸಿ ಅವರ ಕಾರಿಗೆ ಡಿಕ್ಕಿ ಹೊಡೆದ ಶ್ರೀಕುಮಾರ ಬಸ್
ಸ್ಥಳಕ್ಕೆ ಬಂದಿರುವ ಕುಮಟಾದ ಅರಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಚಿರತೆ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ…ಕಳೆ ವರ್ಷ ಕೂಡ ಬಾಡ ಗ್ರಾಮದ ಮಾದರಿ ರಸ್ತೆಯಲ್ಲಿರುವ ನಾಗರಾಜ್ ನಾಯ್ಕ (ಸೀತು ನಾಯ್ಕ) ಅವರ ಮನೆ ಒಳಗೆ ಚಿರತೆ ನುಗ್ಗಿ ಸಾಕಷ್ಟು ಆತಂಕ ಸೃಷ್ಠಿ ಮಾಡಿತ್ತು.. ಮತ್ತೆ ಇದೀಗ ಬಾಡ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ.