ಬೆಂಗಳೂರು : ಇನ್ನ ಮೇಲೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಆರಂಭಿಸಲಾಗುವುದು ಎಂದಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಗುಡ್ ನ್ಯೂಸ್ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ಕಲ್ಯಾಣ ಕರ್ನಾಟಕದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ,ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ
- ಕರಾವಳಿ ಉತ್ಸವ : ಐತಿಹಾಸಿಕ ಸ್ಥಳ, ಅಲ್ಲಿಗೆ ಭೇಟಿ ನೀಡಿದ ಗಣ್ಯ ವ್ಯಕ್ತಿಗಳ ಛಾಯಾಚಿತ್ರ ಪ್ರದರ್ಶನ
- ಆಕಾಶದಲ್ಲೇ ಮಾನವೀಯತೆ: ವಿಮಾನದಲ್ಲಿ ಅಸ್ವಸ್ಥ ಮಹಿಳೆಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್
- Indian-Navy/ನೌಕಾನೆಲೆ ವಜ್ರಕೋಶದಲ್ಲಿ ರಹಷ್ಯ ಸ್ಪೋಟ ವಿಚಾರ : ನೌಕಾಪಡೆ ಸ್ಪಷ್ಟನೆ
ರಾಜ್ಯದಲ್ಲಿರುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಎಲ್ ಕೆಜಿ, ಯುಕೆಜಿಯಿಂದ 12ನೇ ತರಗತಿಯವರೆಗೆ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಸರಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದಿದ್ದಾರೆ.ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಇದಕ್ಕಾಗಿ ಶಿಕ್ಷಕರು ಕೊರತೆಯಿರುವಂತ ಶಾಲೆಗಳಿಗೆ 45 ಸಾವಿರ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ.
ಸದ್ಯದಲ್ಲೇ 5,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. ಈಗಾಗಲೇ 1200 ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.





