suddibindu.in
ಹುಬ್ಬಳ್ಳಿ: ಚಾಲಕನ ನಿರ್ಲಕ್ಷ್ಯದಿಂದಾಗಿ ರಸ್ತೆಯಲ್ಲಿ ನಿಂತಿದ್ದ ಕುರಿ ಹಿಂಡಿನ ಮೇಲೆ ಲಾರಿ ಹರಿದ ಪರಿಣಾಮ ಹನ್ನೆರಡಕ್ಕೂ ಹೆಚ್ಚು ಜೀವಗಳು ಉಸಿರು ನಿಲ್ಲಿಸಿದ್ದು, ಹಲವು ಕುರಿಗಳು ನಿತ್ರಾಣಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿಯಲ್ಲಿ ಘಟನೆ ನಡೆದಿದೆ.
ಲಾರಿ ಚಾಲಕ ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಲಾರಿ ಚಲಿಸಿಕೊಂಡು ಬಂದಿದ್ದು, ಈ ವೇಳೆ ಅಲ್ಲೆ ಪಕ್ಕದಲ್ಲಿದ್ದ ಕುರಿಗಳ ಹಿಂಡಿಗೆ ಡಿಕ್ಕಿ ಹಿಡೆದಿದ್ದಾನೆ.ಇದರಿಂದ 12ಕ್ಕೂ ಹೆಚ್ಚು ಕುರಿಗಳು ಜೀವ ಕಳೆದುಕೊಂಡಿದೆ.
ಇದನ್ನೂ ಓದಿ
- ಫೆಬ್ರವರಿ 17 ರಂದು ಅಪರೂಪದ ಸೂರ್ಯಗ್ರಹಣ
- ನಾಳೆ KSRTC ಬಸ್ ಸಂಚಾರದಲ್ಲಿ ವ್ಯತ್ಯಯ : ಪ್ರಯಾಣಿಕರಿಗೆ ಎದುರಾಗಲಿದೆ ಸಂಕಷ್ಟ
- ಉತ್ತರ ಕನ್ನಡದಲ್ಲಿ ಹೀಟ್ ಅಲರ್ಟ್: IMD ಎಚ್ಚರಿಕೆ
ಘಟನೆ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮುಧೋಳ ಮೂಲದ ಕುರಿಗಾರರು ಮಾಲೀಕರೆಂದು ಹೇಳಲಾಗಿದ್ದು, ಮತ್ತಷ್ಟು ಮಾಹಿತಿ ಸಿಗಬೇಕಿದೆ.







