suddibindu.in
KARWAR:ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಶಿರೂರು ಗುಡ್ಡಕುಸಿತ ಘಟನೆಯಿಂದಾಗಿ ರಾಜ್ಯವೆ ಬೆಚ್ಚಿಬಿದ್ದಿದೆ.ಇಲ್ಲಿನ ಭೂ ಕುಸಿತದ ಬಳಿಕ ಎಚ್ಚೇತ್ತುಕೊಂಡಿರುವ ರಾಜ್ಯ ಸರಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನ ತೆರವುಗೊಳಿಸಲು ಮುಂದಾಗಿದೆ.

ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಭೂ ದಾಖಲೆ) ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿದ್ದಾರೆ. 2015ರ ನಂತರದಲ್ಲಿ ರಾಜ್ಯದ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇ, ಸೇರಿದಂತಡ ಇನ್ನಿತರ ಅರಣ್ಯ ಒತ್ತುವರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಗಮನ ಹರಿಸಿ ಪರಿಶೀಲಿಸಿ ಕೂಡಲೇ ಮಾಹಿತಿ ಸಲ್ಲಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ.

ಶಿರೂರು ಗುಡ್ಡಕುಸಿತವಾಗಲು ಐಆರ್‌ಬಿ ಕಂಪನಿ ಹೆದ್ದಾರಿ ಅಗಲೀಕರ ಕಾಮಗಾರಿಗಾಗಿ ಅವೈಜ್ಞಾನಿಕವಾಗಿ ಗುಡ್ಡ ಕೊರೆದಿರುವುದೇ ಕಾರಣ ಎಂದು ತಜ್ಞರು ಈಗಾಗಲೇ ವರದಿ ನೀಡಿದ್ದಾರೆ. ಬಳಿಕ ರಾಜ್ಯ ಸರಕಾರ ಘಟನೆಯನ್ನ ಗಂಭೀರವಾಗಿ ಪರಿಗಣಿಸಿದ್ದು. ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳನ್ನ ಕೊರತೆದು ತೋಟ, ಮನೆ, ಹೋಂ ಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಮರಗಳನ್ನ ಕಡಿದಿರುವುದು ದುರಂತಕ್ಕೆ ಕಾರಣ ಎಂಬುದು ಸರಕಾರಕ್ಕೆ ಮನದಟ್ಟಾಗಿದೆ. ಹೀಗಾಗಿ ಅರಣ್ಯ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ತೆಗುಕೊಂಡಿದೆ..

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ಅನಧಿಕೃತ ಹೋಂ ಸ್ಟೇ ವಿರುದ್ಧ ಕ್ರಮ : ಈಶ್ವರ್‌ ಖಂಡ್ರೆ
ಈ ಬಗ್ಗೆ ಮಾತನಾಡಿದ್ದ ಸಚಿವ ಈಶ್ವರ್‌ ಖಂಡ್ರೆ, ʼʼರಾಜ್ಯದ ಪಶ್ಚಿಮ ಘಟ್ಟಗಳಲ್ಲಿ 2015ರ ನಂತರ ಅರಣ್ಯ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಿರ್ಮಿಸಿರುವ ಹೋಮ್ ಸ್ಟೇ, ರೆಸಾರ್ಟ್ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಕೃತಿ ವಿಕೋಪದಿಂದ ಆಗುತ್ತಿರುವ ಅನಾಹುತಗಳನ್ನು ನೋಡುತ್ತಿದ್ದೇವೆ.

ಉತ್ತರಕನ್ನಡ ಜಿಲ್ಲೆಯ ಶಿರೂರು ಹಾಗೂ ಕೇರಳದಲ್ಲಿ ನಡೆದ ಘಟನೆಯಿಂದ ನಾಲ್ಕೈದು ಹಳ್ಳಿ ನಾಪತ್ತೆಯಾಗಿ ನೂರಾರು ಜನರು ಸಾವಿಗೀಡಾಗಿದ್ದಾರೆ. ವಿಶೇಷವಾಗಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ರಸ್ತೆ ಮಾಡಲು ಅರಣ್ಯವನ್ನ ಅವೈಜ್ಞಾನಿಕವಾಗಿ ಕೊರೆಯಲಾಗುತ್ತಿದೆ. ಇದರಿಂದಾಗಿ ಅನಾಹುತ ಆಗುತ್ತದೆ. ಮೊದಲು ಕೃಷಿ ಚಟುವಟಿಕೆಗಳನ್ನು ಶುರುಮಾಡಿ ನಂತರ ರೆಸಾರ್ಟ್ ಮಾಡುತ್ತಾರೆ. ಹೀಗಾಗಿ ಅನಧಿಕೃತ ಹೋಂ ಸ್ಟೇ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿರುವುದಾಗಿ ಸಚಿವರು ತಿಳಿಸಿದ್ದಾರೆ.

ಉತ್ತರಕನ್ನಡಲ್ಲೂ ಇದೆ ಅನಧಿಕೃತ ರೆಸಾರ್ಟ್‌,ಹೋಂ ಸ್ಟೇ
ಉತ್ತರಕನ್ನಡ ಜಿಲ್ಲೆಯ ಗೋಕರ್ಣ, ದಾಂಡೇಲಿ, ಜೊಯೀಡಾ ಸೇರಿದಂತೆ‌ ಅನೇಕ‌‌ ಕಡೆಯಲ್ಲಿ ನೂರಾರು ಹೋಂ‌ ಸ್ಟೇ ಹಾಗೂ ರೆಸಾರ್ಟ್‌ಗಳು ತಲೆ ಎತ್ತುಕೊಂಡಿದೆ. ಇನ್ನೂ ಅನೇಕ ಕಡೆ‌ ರೆಸಾರ್ಟ್ ನಿರ್ಮಾಣಕ್ಕಾಗಿ ಗುಡ್ಡಗಳನ್ನ ಈಗಲ್ಲು ಸಹ ಕೊರೆಯಲಾಗುತ್ತಿದೆ.ಆದರೆ ಸ್ಥಳೀಯ ಅಧಿಕಾರಿಗಳು ಯಾವ ಕ್ರಮ ಜರುಗಿಸಿದ್ದಾರೆ ಎನ್ನುವುದು ಭಗವಂತನಿಗೆ ಮಾತ್ರ ಗೊತ್ತು.

ಇದೀಗ ಸರಕಾರ ಅನಧಿಕೃತ ರೆಸಾರ್ಟ್ ಹಾಗೂ ಹೋಂ ಸ್ಟೇ‌ಗಳ ಕಡಿವಾಣಕ್ಕೆ ಮುಂದಾಗಿದ್ದು,ಜಿಲ್ಲೆಯ ಅಧಿಕಾರಿಗಳು ಈ ಬಗ್ಗೆ ತಕ್ಷಣ ಕ್ರಮ ಜರುಗಿಸದೆ ಹೋದರೆ ಮುಂದಿನ ದಿನದಲ್ಲಿ ವಯನಾಡು ದುರಂತಕ್ಕಿಂತ ದೊಡ್ಡ ದುರಂತ ಜಿಲ್ಲೆಯಲ್ಲಿ ನಡೆದರೆ ಅಚ್ಚರಿ ಪಡೆಬೇಕಾಗಿಲ್ಲ, ಹೀಗಾಗಿ ಘಟನೆ ಆಗುವ ಮುನ್ನವೆ ಎಚ್ಚೇತ್ತುಳ್ಳಬೇಕಿರುವುದು ಅನಿರ್ವಾಯವಾಗಿದೆ.

ಕಡತೀರದಲ್ಲಿನ ರೆಸಾರ್ಟ್‌ ಗಳಿಗೂ ಕಾದಿದೆ ಅಪಾಯ.!
ಉತ್ತರಕನ್ನಡ ಜಿಲ್ಲೆಯ ಗೋಕರ್ಣ,ಕುಮಟಾ ತಾಲೂಕಿನ ಬಾಡ ಸೇರಿದಂತೆ ಹಲವು ಕಡಲತೀರದಲ್ಲಿ ನೂರಾರು ಅನಧಿಕೃತ ರೆಸಾರ್ಟಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. CRZ ನಿಯಮಗಳನ್ನ ಉಲ್ಲಂಘನೆ ಮಾಡಿ ರೆಸಾರ್ಟ್‌ ನಡೆಸಲಾಗುತ್ತಿದೆ. ಈಗಾಗಲೇ ಕಳೆದ ಒಂದು ವಾರದಲ್ಲಿ ಅರಬ್ಬಿ ಸಮುದ್ರದಲ್ಲಿ ಅಲೆಯ ಅಬ್ಬರ ಹೆಚ್ಚಾಗಿರುವ ಕಾರಣ ಕಡಲತೀರದಲ್ಲಿರುವ ಅನೇಕ ರೆಸಾರ್ಟ್ ಗಳು ಅಪಾಯಕ್ಕೆ ಸಿಲುಕಿವೆ,

ಈ ರೀತಿ ಕಡಲ ತೀರದ ಮೇಲೆ ಕಾನೂನು ಬಾಹಿರವಾಗಿ ರೆಸಾರ್ಟ್‌ಗಳು ನಿರ್ಮಾಣವಾಗಿದ್ದರು. ಇದುವರೆಗೆ ಯಾವುದೇ ಕ್ರಮ ಜರುಗಿಲ್ಲ.ಗುಡ್ಡಕುಸಿತವಾದ ರೀತಿಯಲ್ಲೆ ಸಮುದ್ರದ ಅಲೆ ಅಪ್ಪಳಿಸಿದರೆ ಅದೆಷ್ಟು ಜೀವಗಳನ್ನ ಪಡೆದುಕೊಳ್ಳಬಹುದು ಎನ್ನುವುದನ್ನ ನಾವು ನೀವೆಲ್ಲಾ ಉಹಿಸಲು ಸಾಧ್ಯವಿರದು ದೊಡ್ಡ ಅನಾಹುತ ಎದುರಾಗುವ ಸಾಧ್ಯೆ ಇದೆ.

ಹೀಗಾಗಿ ಸರರಕಾರ ಗುಡ್ಡದ ಅಂಚಿನಲ್ಲಿರುವ ಅನಧಿಕೃತ ಹೋ ಸ್ಟೇ ಹಾಗೂ ರೆಸಾರ್ಟ್ ಗಳ ವಿರುದ್ದ ಕ್ರಮ ಜರುಗಿಸುವ ರೀತಿಯಲ್ಲೆ ಕಡಲ ತೀರದಲ್ಲಿರುವ ಅನಧಿಕೃತ ರೆಸಾರ್ಟ್ ಗಳನ ತೆರವಿಗು ಮುಂದಾಗಬೇಕಿರುವುದು ಅನಿರ್ವಾಯವಾಗಿದೆ..

ಇದನ್ನೂ ಓದಿ