suddibindu.in
Honnavr :ಹೊನ್ನಾವರ : ಭಾರೀ ಮಳೆಯಿಂದಾಗಿ ಮನೆ ಕುಸಿತವಾಗಿ ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದ ವೃದ್ಧೆಯನ್ನ ರಕ್ಷಣೆ ಮಾಡಿರುವ ಘಟನೆ ಹೊನ್ನಾವರ ತಾಲೂಕಿನ ಆರೋಳ್ಳಿಯ ಮುಂಡಗೋಡ ಗ್ರಾಮದಲ್ಲಿ ನಡೆದಿದೆ.
ಸುಲಭ ಸುಬ್ರಾಯ ಕಾಮತ್ (80) ಎಂಬಾಕೆಯೆ ಪ್ರಾಣಾಪಾಯದಿಂದ ಪಾರಾಗಿರುವ ವೃದ್ದೆಯಾಗಿದ್ದಾರೆ. ಇವರು ಮನೆಯ ಹಿಂಬದಿಯಲ್ಲಿ ಕುಳಿತಿರುವಾಗ ಭಾರೀ ಮಳೆಯಿಂದಾಗಿ ಬಿರುಕು ಬಿಟ್ಟಿದ್ದ ಮನೆ ಗೋಡೆ ಕುಸಿದು ಬಿದ್ದೆ. ಪರಿಣಾಮ ಅಲ್ಲೆ ಕುಳಿತ್ತಿದ್ದ ವೃದ್ದೆ ಸುಲಭಾ ಕಾಮತ್ ಎಂಬುವವರು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದರು.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಅಗ್ನಿಶಾಮಕ ದಳದ ಠಾಣಾಧಿಕಾರಿ ಪ್ರದೀಪ್ ನಾಯ್ಕ ಹಾಗೂ ಸಿಬ್ಬಂದಿಗಳಾದ ಬಸವರಾಜ್, ವಿಶ್ವಾಸ್,ನಾಗರಾಜ, ಮಂಜುನಾಥ,ಕಿರಣ್ ಹಾಗೂ ಸ್ಥಳೀಯರ ಸಹಾಯದೊಂದಿಗೆ ಮಣ್ಣಿನ ಅಡಿಯಲ್ಲಿ ಸಿಲುಕ್ಕಿದ್ದ ವೃದ್ಧೆಯನ್ನ ರಕ್ಷಣೆ ಮಾಡಲಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ