suddibindu.in
ನವದೆಹಲಿ: ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಶುರುವಾಗಿದೆ ಹೀಗಾಗಿ ಅವರು ಯಾವದೇ ಕ್ಷಣದಲ್ಲಿ ಬೇಕಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ..
ಅವರು ಈ ಕುರಿತು ದೆಹಲಿಯಲ್ಲಿ ಮಾಧ್ಯಮಗೋಷ್ಠಿಯನ್ಮ ಉದ್ದೇಶಿಸಿ ಮಾತನಾಡಿದ ವಿಜಯೇದ್ರ ಅವರು, ಸಿಎಂ ರಾಜೀನಾಮೆಗೆ ಕ್ಷಣಗಣನೆ ಶುರುವಾಗಿದೆ. ಡಿ.ಕೆ. ಶಿವಕುಮಾರ್ ಇತ್ತೀಚೆಗೆ ವೈಷ್ಟೋದೇವಿಗೆ ತೆರಳಿ ಆಶೀರ್ವಾದ ಪಡೆದುಕೊಂಡು ಬ೦ದಿದ್ದಾರೆ. ಯಾವಾಗಬೇಕಾದ್ರು ಸಿದ್ದರಾಮಯ್ಯ ಕೆಳಗಿಳಿಯಬಹುದು ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಇನ್ನೂ ಶುರುವಾಗಿಲ್ಲ. ಹೊಸದಾಗಿ ಯಾವುದೇ ಯೋಜನಗಳನ್ನು ಸರ್ಕಾರ ಅನುಷ್ಠಾನಗೊಳಿಸುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಹದಗೆಟ್ಟಿದ್ದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಗೌರವಧನ ಕೊಟ್ಟಿಲ್ಲ ಎಂದು ಸಿ ಎಂ ವಿರುದ್ಧ ಆರೋಪಿಸಿದ್ದಾರೆ.
ಇದನ್ನೂ ಓದಿ