suddibindu.in
ಭಟ್ಕಳ :ಕೊಂಕಣ ರೈಲ್ವೆ ಮಾರ್ಗದಲ್ಲಿ ಚಲಿಸುತ್ತಿದ್ದ ಬೆಂಗಳೂರು ರೈಲಿನಲ್ಲಿ ಭಟ್ಕಳ ಮೂಲದ ವ್ಯಕ್ತಿ ಓರ್ವ ಯುವತಿಯ ಮಾನಭಂಗಕ್ಕೆ ಯತ್ನಿಸಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ
.

ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿಯಾಗಿದ್ದಾನೆ. ಉಡುಪಿ ಮೂಲದ ಯುವತಿ ಬೆಂಗಳೂರಿನಿಂದ ಮಣಿಪಾಲಗೆ ಬರುತ್ತಿದ್ದ ವೇಳೆ ಮಾನಭಂಗಕ್ಕೆ ಯತ್ನಿಸಲಾಗಿದೆ. ಯುವತಿ ಮಣಿಪಾಲ‌ ಮೂಲದವಳಾಗಿದ್ದು, ಈಕೆ‌ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾಳೆ.

ಈ ಕಾಮುಕ ವ್ಯಕ್ತಿ ಬೆಂಗಳೂರಿನಿಂದ ಬರುತ್ತಿದ್ದ ಎನ್ನಲಾಗಿದೆ.ಯುವತಿ ಇರುವ ಬೊಗಿಯಲ್ಲೆ ಕುಳಿತ್ತಿದ್ದ ಯುವಕ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ ಆಕೆಯ ಮಾನಭಂಗಕ್ಕೂ ಯತ್ನಿಸಿದ್ದ ಎನ್ನಲಾಗಿದೆ. ಆತನ ಅಸಭ್ಯ ವರ್ತನೆ ನೋಡಿದ ಯುವತಿ ಉಡುಪಿ ರೈಲ್ವೆ ಪೊಲೀಸ್‌ಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಮದತ್ ಆ್ಯಪ್ ಮೂಲಕವೂ ದೂರು ನೀಡಿದ್ದಾರೆ. ಯುವತಿ ನೀಡಿದ ಮಾಹಿತಿ ಆಧರಿಸಿ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ