ಸುದ್ದಿಬಿಂದು ಬ್ಯೂರೋ
ಕಾರವಾರ : ಮೂಡ ಹಗರಣದ ವಿಚಾರದಲ್ಲಿ ಸಿ ಎಂ ಬದಲಾವಣೆ ಮಾಡಲಾಗತ್ತೆ ಅಂತಾ ವಿರೋಧ ಪಕ್ಷದ ನಾಯಕರು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಗೆ ಮುಂದಾಗಿದ್ದಾರೆ ಎನ್ನಲಾಗಿದೆ, ಉತ್ತರಕನ್ನಡ ಜಿಲ್ಲೆಯ ಓರ್ವರಿಗೆ ಸ್ಥಾನ ಖಚಿವಾಗಿದೆ ಎನ್ನುವ ಬಗ್ಗೆ ಮಾಹಿತಿ ಕಾಂಗ್ರೆಸ್ ವಲಯದಿಂದ ಕೇಳಿ ಬರುತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ನಾಯಕರು ಎಂದು ಗುರುತಿಸಿಕೊಂಡವರ ಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದವರಿಗೆ ಸ್ಥಾನ ಮಾನ ನೀಡುವ ಉದ್ದೇಶದಿಂದ ಹಾಗೂ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕಾ ಪಂಚಾಯತ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿಯುವವರಿಗೆ ಇನ್ನಷ್ಟು ಶಕ್ತಿ ನೀಡುವ ಉದ್ದೇಶದಿಂದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಪಕ್ಷ ಮುಂದಾಗಿದೆ.
ಈಗಾಗಲೇ ಉತ್ತರಕನ್ನಡ ಜಿಲ್ಲೆಯಿಂದ ಕೆಲ ಮಾಜಿ ಶಾಸಕರುಗಳು ಸೇರಿ ಅನೇಕರು ಅಧ್ಯಕ್ಷ ಸ್ಥಾನಕ್ಕಾಗಿ ಪಕ್ಷದ ನಾಯಕರಿಗೆ ಅರ್ಜಿ ಸಹ ಸಲ್ಲಿಸಿಯಾಗಿದೆ..ಇನ್ನೂ ಕೆಲವರು ಬೆಂಗಳೂರಿನಲ್ಲೆ ಬಿಡುಬಿಟ್ಟು ಅಧ್ಯಕ್ಷ ಸ್ಥಾನಕ್ಕಾಗಿ ಅನೇಕ ದಿನಗಳಿಂದ ನಾಯಕರನ್ನ ಭೇಟಿಯಾಗಿ ಅಧ್ಯಕ್ಷ ಸ್ಥಾನ ತಮ್ಮಗೆ ಒಲಿಯುವಂತೆ ಮಾಡಿ ಎಂದು ಕೇಳಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಜಿಲ್ಲೆಯ ನಾಯಕರ ಮೂಲಕ ರಾಜ್ಯ ನಾಯಕರ ಮೇಲೆ ನಿಗಮ ಮಂಡಳಿ ಸ್ಥಾನಕ್ಕಾಗಿ ಒತ್ತಡ ಹೆರುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಮಂಕಾಳು ವೈದ್ಯ ಸೇರಿ ಜಿಲ್ಲೆಯಲ್ಲಿ ಒಟ್ಟು ನಾಲ್ವರು ಕಾಂಗ್ರೆಸ್ ಶಾಸರಿದ್ದಾರೆ. ಅದರಲ್ಲಿ ಈಗಾಗಲೇ ಕಾರವಾರ ಶಾಸಕ ಸತೀಶ ಸೈಲ್ ಅವರಿಗೆ ನಿಗಮ ಮಂಡಳಿ ಅಧ್ಯಕ್ಷಸ್ಥಾನ ನೀಡಿ ಆಗಿದೆ. ಆದರೂ ಸಹ ಈ ನಾಲ್ವರು ತಮ್ಮ ತಮ್ಮ ಆಪ್ತರಿಗೆ ನಿಗಮಮಂಡಳಿಯಲ್ಲಿ ಸ್ಥಾನ ಕೊಡಿಸಲು ಎಲ್ಲಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆನ್ನಲಾಗಿದೆ.ಅರ್ಜಿ ಸಲ್ಲಿಸಿದ ಅನೇಕರು ತಮ್ಮಗೆ ಸಿಕ್ಕೆ ಹೋಗಿದೆ, ಘೋಷಣೆ ಮಾತ್ರ ಬಾಕಿ ಇದೆ ಅಂತಾ ಆಪ್ತರ ಜೊತೆಯಲ್ಲಿ ಹೇಳಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತದೆ.
ಆದರೆ ಅದೇನೆ ಇದ್ದರು ಸಹ ಕಾಂಗ್ರೆಸ್ ಹೈಕಮಾಂಡ ಮಾತ್ರ ಯಾರಿಗೆ ಅಧ್ಯಕ್ಷ ಸ್ಥಾನ ನೀಡಲಿದೆ ಎನ್ನುವ ಬಗ್ಗೆ ಎಲ್ಲಿಯೂ ಖಚಿತ ಪಡಿಸಿಲ್ಲ.ಸದ್ಯ ಸುದ್ದಿಬಿಂದು ನ್ಯೂಸ್ಗೆ ಸಿಕ್ಕಿರೋ ಮಾಹಿತಿ ಪ್ರಕಾರ ಜಿಲ್ಲೆಯ ಮಾಜಿ ಶಾಸಕರೊಬ್ಬರಿಗೆ ನಿಗಮ ಮಂಡಳಿ ಸ್ಥಾನ ಒಲಿದು ಬರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ…
ಇದನ್ನೂ ಓದಿ