ಕಾರವಾರ: ಜಯ ಕರ್ನಾಟಕ ಜನಪರ ವೇದಿಕೆ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದ ಮೇರೆಗೆ ಉತ್ತರ ಕನ್ನಡ ಜಿಲ್ಲಾ ಜಯ ಕರ್ನಾಟಕ ಜನಪರ ವೇದಿಕೆಯಿಂದ ಕಡವಾಡದ ಶ್ರೀ ದೇವತಿ ದೇವಿ ದೇವಸ್ಥಾನದಲ್ಲಿ ಶ್ರೀಗಂಧ ಮತ್ತು ರಕ್ತ ಚಂದನ ಸಸ್ಯ ನೆಡುವುದರ ಮೂಲಕ ವಾರ್ಷಿಕೋತ್ಸವ ಆಚರಿಸಿ ಸಂಭ್ರಮಿಸಲಾಯಿತು.

ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಸ್ ಗುನಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ರಾಜ್ಯದ ನೆಲ ಜಲ ಮತ್ತು ಸಾರ್ವಜನಿಕರ ಹಿತಾಸಕ್ತಿಯ ರಕ್ಷಣೆಗಾಗಿ ಹುಟ್ಟಿಕೊಂಡ ಸಂಘಟನೆಯು ನಾಲ್ಕು ವರ್ಷಗಳನ್ನು ಪೂರೈಸಿದ್ದು ಹಲವು ವಿಧಾಯಕ ಕಾರ್ಯಕ್ರಮಗಳ ಮೂಲಕ ಜನರಿಗೆ ಭರವಸೆಯನ್ನು ಮೂಡಿಸಿದೆ ಎಂದರು.

ಜಿಲ್ಲಾಧ್ಯಕ್ಷ ದಿಲೀಪರಿಗೆ ಅರ್ಗೇಕರ್ ಮಾತನಾಡಿ, ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ನಾಲ್ಕು ವರ್ಷಗಳಿಂದ ವಿವಿಧ ಜನಪರ ಹೋರಾಟಗಳನ್ನು ಕೈಗೊಳ್ಳಲಾಗಿದೆ. ಅವರ ಆಶಯದಂತೆ ಇದು ಅರ್ಥಪೂರ್ಣ ಯಾನವಾಗಿದ್ದು, ಇತರರ ಸೇವೆಯಲ್ಲಿ ತೊಡಗಿಸಿಕೊಂಡು ನಾವು ಸಂಘಟನೆಯ ಮೂಲಕ ಜನರಿಗೆ ಮತ್ತು ಸಮಾಜಕ್ಕೆ ಸೇವೆ ಸಲ್ಲಿಸುವ ಬದ್ಧತೆಯನ್ನು ಹೊಂದಿದ್ದೇವೆ. ಸಮೃದ್ಧ ನಾಡಿನ ಹಿತರಕ್ಷಣೆಗೆ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಿದ್ದೇವೆ ಎಂದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿಯಾದ ಸುದೇಶ್ ನಾಯ್ಕ,ಜಿಲ್ಲಾ ಸಂಚಾಲಕರಾದ ಸುನಿಲ್ ತಾಂಡೇಲ್, ಸಂಘಟನೆಯ ಪ್ರಮುಖರಾದ ಸಂದೇಶ್ ಮಾಜಳೆಕರ್. ಸುರೇಂದ್ರ ಮಾಂಜರೇಕರ್ ಅಜಯ್ ಗುನಗಿ. ಸುಧಾಕರ್ ಗುನಗಿ. ಕೃಷ್ಣ ಗುನಿಗಿ. ಪ್ರಕಾಶ್ ಗುನಗಿ. ಇನ್ನು ಹಲವರು ಉಪಸ್ಥಿತರಿದ್ದರು.

ಗಮನಿಸಿ