ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ಗೆ ಅವರಿಗೆ ಜಾಮೀನು ನೀಡಲು ಬೆಂಗಳೂರು ಸೆಷನ್ಸ್ ನ್ಯಾಯಾಲ ನಿರಾಕರಿಸಿದ್ದು ದರ್ಶನ್ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದೆ. 120ಕ್ಕೂ ಹೆಚ್ಚು ದಿನಗಳ ಕಾಲ ಜೈಲಿನಲ್ಲಿ ಕಾಲ ಕಳೆದಿರುವ.ನಟ ದರ್ಶನ್ಗೆ ಜೈಲುವಾಸವೇ ಗತಿಯಾಗಿದೆ.
ದರ್ಶನ್ ಗೆ ಇಂದು ಜಾಮೀನು ಸಿಗಬಹುದು ಎಂದು ಅವರ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರ ಇಂದೂ ಕೂಡ ನ್ಯಾಯಾಲಯ ದರ್ಶನ್ ಜಾಮೀನು ನಿರಾಕರಣೆ ಮಾಡಿರುವುದರಿಂದ ಡಿ ಬಾಸ್ ಇನ್ನಷ್ಟು ದಿನ ಜೈಲಿನಲ್ಲೆ ಕಾಲ ಕಳೆಯಬೇಕಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಗೌಡ, ಎಂ ಲಕ್ಷ್ಮಣ್, ಆರ್ ನಾಗರಾಜು, ರವಿಶಂಕರ್ ಮತ್ತು ದೀಪಕ್ ಕುಮಾರ್ ಅವರ ಜಾಮೀನು ಅರ್ಜಿಗಳಿಗೆ ಸಂಬಂಧಿಸಿದ ಆದೇಶವನ್ನು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಜೈಶಂಕರ್ ಅವರು ಸೋಮವಾರ ಪ್ರಕಟಿಸಿದ್ದಾರೆ.
ಗಮನಿಸಿ
- ಚಲಿಸುವ ರೈಲಿನಿಂದ ಬಿದ್ದವನ್ನ ಪ್ರಾಣ ಉಳಿಸಿದ ಪಾಯಿಂಟ್ಸ್ಮನ್ ಗಣಪತಿ ನಾಯ್ಕ
- ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು ಮಾಸ್ತಿಜಡ್ಡಿ ಗ್ರಾಮದಲ್ಲಿ ದುರಂತ
- ಕಾರವಾರ ಬಂದರಿನಲ್ಲಿ ಬಿಟುಮಿನ್ ಉಕ್ಕಿ ಹರಿದು ಆತಂಕ; ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ
.

