ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ರಸ್ತೆಯಲ್ಲಿ ಬಿದ್ದುರುವ ಗುಂಡಿಗಳು ಹಾಗೂ ರಾಷ್ಟ್ರಿಯ ಹೆದ್ದಾರಿ ಹಾಗೂ ಹೆದ್ದಾರಿಯಲ್ಲಿರುವ ಸೇತುವೆಗಳ ಕುರಿತು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಪ್ರಾಧಿಕಾರದ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಜಿಲ್ಲೆಯಲ್ಲಿನ ಹಳ್ಳಿಗಳಲ್ಲಿ,ರಾಜ್ಯ ಹೆದ್ದಾರಿಗಳಲ್ಲಿ ಬಿದ್ದಿರುವ ರಸ್ತೆಗುಂಡಿಗಳನ್ನು ತಕ್ಷಣ ಸರಿಪಡಿಸುವಂತೆ ಲೋಕೋಪಯೋಗಿ ಇಲಾಖೆ ಹಾಗೂ ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಇನ್ನು ಆಗಬೇಕಿರುವ ರಸ್ತೆ ಹಾಗೂ ಕಿರು ಸೇತುವೆಗಳ ಬಗ್ಗೆ ಮಾಹಿತಿ ಪಡೆದ ಸಚಿವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾದ ಸಮಸ್ಯೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಳೇಯ ಸೇತುವೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಹೆದ್ದಾರಿ ಸಮಸ್ಯೆಗಳಿಂದ ಈಗಾಲೆ ವಾಹನ ಸಂಚಾರ ಬಂದ್ ಮಾಡಿರುವ ಕೆಲವು ಸೇತುವೆಗಳನ್ನು ತಕ್ಷಣ ಪರಿಶೀಲಿಸಿ ಅದನ್ನು ಸರಿ ಪಡಿಸಿ ಸಂಚಾರಕ್ಕೆ ಅನುವು ಮಾಡಿ ಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಗಮನಿಸಿ