ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಐದು ತಿಂಗಳಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್‌ಗೆ ಬೆನ್ನು ನೋವಿನ ಹಿನ್ನಲೆಯಲ್ಲಿ ನಾಳೆ ಜಾಮೀನು ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್,ಪವಿತ್ರಾ ಗೌಡ ಸೇರಿ ಹತ್ತಕ್ಕೂ ಹೆಚ್ಚು ಮಂದಿಯನ್ನ ಪೊಲೀಸರು ಬಂಧಿಸಿದ್ದರು‌.ಎಲ್ಲಾ ಆರೋಪಿಗಳನ್ನ ಪರಪ್ಪನ ಅಗ್ರಹಾರ ಜೈಲಿಗೆ ತಳ್ಳಲಾಗಿತ್ತು. ಆದರೆ ಅಲ್ಲಿ ದರ್ಶನ್‌ಗೆ ರಾಜತಿಥ್ಯ ನೀಡಲಾಗುತ್ತಿದೆ ಎನ್ನುವ ಕಾರಣಕ್ಕೆ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಈ ವೇಳೆ ದಿನದಿಂದ ದಿನಕ್ಕೆ ದರ್ಶನ್‌ಗೆ ಬೆನ್ನು ನೋವು ಕಾಣಿಸಿಕೊಂಡು ಸಂಕಷ್ಟಕ್ಕೆ ಒಳಾಗುತ್ತಿಲ್ಲೇ‌ ಇದ್ದರು.

ಇದೆ ಕಾರಣವನ್ನ ಮುಂದಿಟ್ಟಿರುವ ದರ್ಶನ್ ಪರ ವಕೀಲರು ಜಾಮೀನು ನೀಡುವಂತೆ ಮನವಿ ಮಾಡುತ್ತ ಬಂದಿದ್ದರು ಸಹ ಇದುವರಗೆ ಜಾಮೀನು ಸಿಕ್ಕಿರಲಿಲ್ಲ. ಇದೀಗ ನಾಳೆ(ಸೋಮವಾರ) ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲ್ಲಿದ್ದು, ಈ ವೇಳೆ ದರ್ಶನ್ನಗೆ ಬೆನ್ನು ನೋವು ಇರುವ ಬಗ್ಗೆ ವೈದ್ಯಕೀಯ ವರದಿ ನೀಡುವಂತೆ ನ್ಯಾಯಾದೀಶರು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈಗಾಗಲೇ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ದರ್ಶನ್‌ಗೆ ಬೆನ್ನು ನೋವು ಉಲ್ಬಣ ಇರುವುದಾಗಿ ವೈದ್ಯಕೀಯ ತಪಾಸಣೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದ್ದು, ಈ ವರದಿಯನ್ನೆ ಆಧರಿಸಿ ದರ್ಶನ್ ಪರ ವಕೀಲರು ನಾಳೆ ವಾದ ಮಂಡಿಸುವ ಸಾಧ್ಯತೆ ಇದೆ..

ಇದನ್ನೂ ಓದಿ