ಸುದ್ದಿಬಿಂದು ಬ್ಯೂರೋ ವರದಿ(suddibindu Digital News)
Tumkur:ತುಮಕೂರು. ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಮರಕ್ಕೆ ಡಿಕ್ಕಿ(car accident)ಹೊಡೆದು ಭೀರಕರವಾದ ಅಪಘಾತ ನಡೆದಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ರಾಜ್ಯ ಹೆದ್ದಾರಿ 33 ರಲ್ಲಿರುವ ರಾಜೇಂದ್ರ ಪುರ ಗೇಟ್ ಬಳಿ ನಡೆದಿದೆ.
ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು. ಮರಕ್ಕೆ ಗುದಿದ ರಭಸಕ್ಕೆ ಕಾರಿನಲ್ಲಿದ್ದ ಓರ್ವ ಸಾವು, ಮೂವರಿಗೆ ಗಂಭೀರ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು, ತುಮಕೂರಿನಲ್ಲಿ ಮದುವೆ ಮುಗಿಸಿ ಮಂಡ್ಯ ಕಡೆಗೆ ತೆರಳುತ್ತಿದ್ದರು.ಈ ವೇಳೆ ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು , ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಕುಣಿಗಲ್ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು,ಪ್ರಕರಣ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಮನಿಸಿ
- ರೌಡಿಶೀಟರ್ಗಳ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿತ : ಮುರುಡೇಶ್ವರದಲ್ಲಿ ತಡರಾತ್ರಿ ಘಟನೆ
- ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಲು ರೂಪಾಲಿ ನಾಯ್ಕ ಕರೆ
- ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೌನ ಮುರಿದ ಮಂಕಾಳ ವೈದ್ಯ; ಸಿಎಂ ಕರೆ ಬಗ್ಗೆ ಬಿಚ್ಚಿಟ್ಟ ಸತ್ಯ
- ಹಾಡುಹಗಲೇ ಗ್ರಾ.ಪಂ ಮಾಜಿ ಅಧ್ಯಕ್ಷನ ಶೂಟೌಟ್
- ಉತ್ತರಕನ್ನಡಕ್ಕೆ ಸಚಿವ ಸ್ಥಾನ ಸಿಗದಿರುವುದು ಬೇಸರದ ಸಂಗತಿ: ಪ್ರಸಾದ ಗಾಂವಕರ್

