ಸುದ್ದಿಬಿಂದು ಬ್ಯೂರೋ ವರದಿ
ಮುರುಡೇಶ್ವರ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ(DKC)ಅವರು ಇಂದು ಮುರುಡೇಶ್ವರ ನೇತ್ರಾಣಿ ದ್ವೀಪಕ್ಕೆ( Nethrani Island) ತೆರಳಿ ಸ್ಕೂಬಾ ಡೈವಿಂಗ್ ಸ್ಥಳದಲ್ಲಿ ಕೆಲ ಸಮಯ ಕಾಲಕಳೆದರು.
- ನಾಳೆ ಆಕಾಶದಲ್ಲಿ ಬ್ಲಡ್ ಮೂನ್ ಅದ್ಭುತ : ಕೆಂಪು ಚಂದ್ರನ ಅಪರೂಪದ ನೋಟಕ್ಕೆ ಕ್ಷಣಗಣನೆ
- ಹೆಬ್ಬೆಟ್ಟು ಗಿರಾಕಿಗಳು ನಾವಲ್ಲ : ಕೆಡಿಪಿ ಸಭೆಯಲ್ಲಿ ಶಾಸಕ ಸೈಲ್ ಆಕ್ರೋಶ
- ಗೇರುಸೊಪ್ಪದ ವೀರಾಂಜನೇಯ ದರ್ಶನ ಪಡೆದ ಕ್ರಿಕೆಟ್ ಸ್ಟಾರ್ ಕೆ.ಎಲ್. ರಾಹುಲ್
- ಇನೋವಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಕಲ್ಬುರ್ಗಿಯಿಂದ ಪ್ರವಾಸಕ್ಕೆ ಬಂದ ವೇಳೆ ಘಟನೆ
ಮುರುಡೇಶ್ವರ ಕಡಲ ತೀರದಿಂದ ಸುಮಾರು 22ಕಿಲೋ ಮೀಟರ್ ದೂರ ಇರುವ ನೇತ್ರಾಣಿ ದ್ವೀಪ ವೀಕ್ಷಣೆಗಾಗಿ ಬೋಟ್ ಮೂಲಕ ಪತ್ನಿ ಉಷಾ,ಪತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಜೊತೆ ಬೋಟ್ ಮೂಲಕ ತೆರಳಿ ಕೆಲ. ಸಮಯ ನೇತ್ರಾ ದ್ವೀಪದ ಸುತ್ತ ಬೋಟ್ ಮೂಲಕ. ಸುತ್ತಾಡಿದ್ದರು.
ಬಳಿಕ ಮಾಧ್ಯಮದರೊಂದಿಗೆ ಮಾತ್ನಾಡಿದ ಡಿಕೆ ಶಿವಕುಮಾರ ನೇತ್ರಾಣಿಯಲ್ಲಿ ಸ್ಕೂಬ್ ಡೈವಿಂಗ್ ಮಾಡೋದನ್ನ ಟಿವಿಯಲ್ಲಿ ನೋಡಿದ್ದೆ. ಮನೆಯವರು ಸಹ ಬಹಳದಿನಗಳಿಂದ ನೇತ್ರಾಣಿ ವೀಕ್ಷಣೆ ಮಾಡಬೇಕು ಅಂತಾ ಇದ್ದರು. ನನಗೂ ಆಸೆ ಇತ್ತು. ಅದಕ್ಕೆ ಇಂದು ಕಾಲ ಕೂಡಿ ಬಂತು..ಇಲ್ಲಿನ ಕಡಲ ತೀರ ಯಾವ ಗೋವಾಗಿಂತ ಏನು ಕಮ್ಮಿಯಿಲ್ಲ.ಇಲ್ಲಿನ ಕಡಲ ತೀರ ನೋಡಿ ಮನಸ್ಸಿಗೆ ನೆಮ್ಮದಿಸಿಕ್ಕಂತಾಗಿದೆ.ಇಲ್ಲಿನ ಪ್ರವಾಸೋದ್ಯಮದ ಬಗ್ಗೆ ಇನ್ನೂ ಹೆಚ್ಚಿನ ಪ್ರಚಾರ ಸಿಗಬೇಕು ಎಂದರು.



