ಸುದ್ದಿಬಿಂದು ಬ್ಯೂರೋ ವರದಿ
Gokarna:ಗೋಕರ್ಣ: ಸಮುದ್ರದಲ್ಲಿ ಈಜಲು ಹೋಗಿದ್ದ ಇಬ್ಬರು ಪ್ರವಾಸಿಗರು ಸಮುದ್ರದಲ್ಲೆಯಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಮಿಡ್ಲ್ ಬೀಚ್ ಬಳಿ ನಡೆದಿದೆ.
ಬೆಂಗಳೂರು ಮೂಲದ ಪ್ರತೀಕ ಪಾಲಕ್ಷಪ್ಪ(33) ವಿಜಯನಗರ ಬೆಂಗಳೂರು,ರವಿ (30) ಬೆಂಗಳೂರು ಮೃತ ಪ್ರವಾಸಿಗರಾಗಿದ್ದಾರೆ.ಬೆಂಗಳೂರಿನಿಂದ ಗೋಕರ್ಣ ಪ್ರವಾಸಕ್ಕೆಂದು 15ಮಂದಿ ಸ್ನೇಹಿತರು ಸೇರಿಕೊಂಡು ಪ್ರವಾಸಕ್ಕೆ ಬಂದಿದ್ದರು. ಇದರಲ್ಲಿ ಇಬ್ಬರೂ ಸಮುದ್ರದಲ್ಲಿ ಈಜಲು ಹೋಗಿದ್ದ ವೇಳೆ ಅಲೆಗೆ ಸಿಲುಕಿ ಮೃತ ಪಟ್ಟಿದ್ದಾರೆ.
ಪ್ರವಾಸಿಗರು ಅಪಾಯಕ್ಕೆ ಸಿಲುಕಿರುವುದನ್ನ ಕಂಡ ಅಲ್ಲಿನ ಲೈಪ್ ಗಾರ್ಡ್ ಸಿಬ್ಬಂದಿಗಳು ತಕ್ಣಣ ದಾವಿಸಿದ್ದರಾದರು. ಅಷ್ಟರಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದರು. ಇಬ್ಬರ ಮೃತ ದೆಹವನ್ನ ಲೈಪ್ ಗಾರ್ಡ್ ಸಿಬ್ಬಂದಿಗಳು ದಡಕ್ಕೆ ತಂದಿದ್ದಾರೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಮನಿಸಿ
- ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು; ಕುಮಟಾ ಕಡ್ಲೆ ಸಮುದ್ರ ತೀರದಲ್ಲಿ ದುರ್ಘಟನೆ
- ಮಾರಿ ಹೊರೆ ಸ್ಥಳಾಂತರ ವೇಳೆ ಗಲಾಟೆ; ವ್ಯಕ್ತಿಯ ಕುತ್ತಿಗೆ ಹಿಸುಕಿ ಕೊಲೆ ಯತ್ನ, ಕುಮಟಾ ಠಾಣೆಯಲ್ಲಿ ಪ್ರಕರಣ
- ಹೊನ್ನಾವರ ಬಂಗಾರದ ಆಭರಣ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹17.08 ಲಕ್ಷ ಮೌಲ್ಯದ ಚಿನ್ನ ಜಪ್ತಿ, ಇಬ್ಬರ ಬಂಧನ
- ಲಾರಿ ಕಳ್ಳತನ ಪ್ರಕರಣದ ಬೆಳಗಾವಿ ಮೂಲದ ಆರೋಪಿ ಬಂಧನ; ಹಳಿಯಾಳ ಪೊಲೀಸರ ಕಾರ್ಯಾಚರಣೆ

