ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ಭಾಗದಲ್ಲಿ ನಿನ್ನೆ ಭೂ ಕಂಪನವಾಗಿರುವುದನ್ನ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಲ್ಲೆಗೆಳೆದಿತ್ತು. ರಿಕ್ಟರ್ ಮಾಪಕದಲ್ಲಿ ಕಂಪನವಾಗಿರುವ ಬಗ್ಗೆ ಯಾವುದೇ ದಾಖಲೆ ಇಲ್ಲ ಎಂದು ವರದಿ ನೀಡಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟಿನಲ್ಲಿ ಭೂ ಕಂಪನದ(earthquake) ಬಗ್ಗೆ ದಾಖಲಾಗಿದೆ.
ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಯಾಣ ಸೇರಿದಂತೆ ಸಿದ್ದಾಪುರ ಸೇರಿ ಕೆಲವು ಕಡೆಯಲ್ಲಿ ನಿನ್ನೆ ರವಿವಾರ 11-59ರ ಸುಮಾರಿಗೆ ಭೂ ಕಂಪನವಾಗಿದೆ.ಇದರಿಂದಾಗಿ ಜನ ಕೂಡ ಭಯ ಭೀತರಾಗಿದ್ದರು. ಈ ಬಗ್ಗೆ ಮಾಧ್ಯಮಗಳು ಸಹ ಸುದ್ದಿ ಮಾಡಿತ್ತು. ಆದರೆ ಇದಾಗ ಬಳಿಕ ಉತ್ತರಕನ್ನಡ ಜಿಲ್ಲಾಡಳಿ ಸಹ ಭೂಮಿ ಕಂಪಿಸಿಲ್ಲ ಎಂದು ಪ್ರಕಟಣೆ ಹೊರಡಿಸಿತ್ತು.ಆದರೆ, ಸೋಮವಾರ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟಿನಲ್ಲಿ ಯಾಣದ ಬಳಿ ಭೂ ಕಂಪನ ಆದ ಬಗ್ಗೆ ದಾಖಲಾಗಿದೆ.
ಶಿರಸಿ, ಸಿದ್ದಾಪುರ, ಹಾಗೂ ಕುಮಟಾ ತಾಲೂಕಿನ ಕೆಲ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ ಆದ ಬಗ್ಗೆ ಜನ ಸಾಕಷ್ಟು ಚರ್ಚಿಸಿದ್ದರು. ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತದ ವಿಪತ್ತು ನಿರ್ವಹಣಾ ಕೋಶದವರು ಬೆಂಗಳೂರು ಕಚೇರಿಗೆ ಭೂ ಕಂಪನದ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದವರು ಅದನ್ನು ನಿರಾಕರಿಸಿದ್ದು, ಅದೇ ಆಧಾರದಲ್ಲಿ ಜಿಲ್ಲಾಡಳಿತ `ಭೂ ಕಂಪನ ನಡೆದಿಲ್ಲ’ ಎಂದು ಪ್ರಕಟಣೆ ಹೊರಡಿಸಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಭೂ ವಿಜ್ಞಾನ ಸಚಿವಾಲಯ ತನ್ನ ಅಧಿಕೃತ ವೆಬ್ಸೈಟಿನಲ್ಲಿ ಭೂ ಕಂಪನ ಆಗಿರುವುದನ್ನು ಖಚಿತಪಡಿಸಿದೆ.
ಗಮನಿಸಿ
- School Holiday/ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂನ್ 1 ರಿಂದ 30ರ ತನಕ ಈ ಸರಕಾರದಿಂದ ಅಧಿಕೃತ ರಜೆ ಘೋಷಣೆ
- ಬೆಂಗಳೂರಿಗೆ ಒಲಿದ ಐಪಿಎಲ್ 2026 ಮುಕುಟ: ಗುಜರಾತ್ ಮಣಿಸಿ ಸತತ ಎರಡನೇ ಬಾರಿ ಚಾಂಪಿಯನ್ ಆದ RCB!
- ಕರಾವಳಿಯಲ್ಲಿ ಜೂನ್ 1ರಿಂದ 61 ದಿನ ಯಾಂತ್ರೀಕೃತ ಮೀನುಗಾರಿಕೆ ಸಂಪೂರ್ಣ ನಿಷೇಧ
- ಹೊನ್ನಾವರದಲ್ಲಿ ಆರ್ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಓವರ್ಲೋಡ್ ಸಾಗಿಸುತ್ತಿದ್ದ 17ಲಾರಿ ವಶಕ್ಕೆ

