ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು
:‌ಮಾಜಿ ಮುಖ್ಯಮಂತ್ರಿ ಕರ್ನಾಟಕದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಸಿಎಂ ಎಸ್.​ಎಂ.ಕೃಷ್ಣ ವಿಧಿವಶರಾಗಿದ್ದು, ಅವರ ನಿಧನ ಹಿನ್ನಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ‌ ಕಾಲೇಜುಗಳಿಗೆ ರಜೆ ಇಲ್ಲ..

ಮಾಜಿ ಸಿ ಎಂ ನಿಧನದ ಬಳಿಕ ರಾಜ್ಯದಲ್ಲಿನ‌ ಶಾಲಾ‌-ಕಾಲೇಜಿಗೆ ರಜೆ ನೀಡಲಾಗುತ್ತಿದೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದು, ಆದರೆ ಸಿ ಎಂ‌ ಸಿದ್ದರಾಮಯ್ಯ ಅವರ ಕಚೇರಿಯಿಂದ ಸುದ್ದಿಬಿಂದು ನ್ಯೂಸ್‌‌ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಎಸ್ ಎಂ ಕೃಷ್ಣ ಅವದು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.ಅವರಿಗೆ 92ವರ್ಷ ವಯಸ್ಸಾಗಿತ್ತು.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​.ಎಂ.ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.

ಗಮನಿಸಿ