ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ(Gokarna)
: ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಕುಡ್ಲೆ‌ ಬೀಚ್ ನಲ್ಲಿ ಈಜಲು ಹೋಗಿ ಅಪಾಯಕ್ಕೆ ಸಿಲುಕಿದ್ದ ಬಿಹಾರ ಮೂಲ್ ಇಬ್ಬರೂ ಪ್ರವಾಸಿಗರನ್ನ ರಕ್ಷಣೆ ಮಾಡಲಾಗಿದೆ.

ಬಿಹಾರ ಮೂಲದ ಪ್ರದೀಪ್ ಗುಪ್ತ (29), ಅರ್ಪಿತ್ ಬೆಹೆರಾ (30) ಎಂಬುವವರನ್ನ ರಕ್ಷಣೆ ಮಾಡಲಾಗಿದೆ. ಇಬ್ಬರೂ ಸ್ನೇಹಿತರು ಗೋಕರ್ಣ‌ಕ್ಕೆ ಬಂದಿದ್ದು, ಈ ವೇಳೆ‌‌ ಕುಡ್ಲೆ‌‌ ಸಮುದ್ರದಲ್ಲಿ ಈಜಲು ತೆರಳಿದ್ದು ಸಮುದ್ರದ‌ ಸುಳಿಗೆ ಇಬ್ಬರೂ ಕೊಚ್ಚಿಕೊಂಡು ಹೋಗಿದ್ದರು.‌ಪ್ರವಾಸಿಗರಿಬ್ಬರೂ ಅಪಾಯಕ್ಕೆ ಸಿಲುಕಿರುವುದನ್ನ ಕಂಡ ಅಲ್ಲಿನ ಲೈಪ್ ಗಾರ್ಡ್ ಸಿಬ್ಬಂದಿಗಳು ಇಬ್ಬರ ಪ್ರಾಣ ಉಳಿಸಿದ್ದಾರೆ.

ಮಿಸ್ಟೇಕ್ ಗೋಕರ್ಣ ಅಡ್ವೆಂಚರ್ ಸಿಬ್ಬಂದಿ ಮತ್ತು ಲೈಫ್ ಗಾರ್ಡ್ ಸಿಬ್ಬಂದಿಗಳಾದ ನಾಗೇಂದ್ರ ಎಸ್ ಕೂರ್ಲೆ ಮತ್ತು ಮಂಜುನಾಥ್ ಎಸ್ ಹರಿಕಂತ್ರ ಹಾಗೂ ಪ್ರವಾಸಿ ಮಿತ್ರ ಶೇಖರ್ ಹರಿಕಂತ್ರ ತಕ್ಷಣ ರಕ್ಷಣೆಗೆ ಬಂದಿದ್ದು ಸ್ಪೀಡ್ ಬೋಟ್ ಮೂಲಕ ರಕ್ಷಣೆ ತೆರಳಿ ಇಬ್ಬರು ಪ್ರವಾಸಿಗರ ಜೀವ ರಕ್ಷಣೆ ಮಾಡಿದ್ದಾರೆ.

ಗಮನಿಸಿ