ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ತಾಲೂಕಿನ ತೋಡೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ಸಂಜೆ ಜಾನುವಾರೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಗೋವಾ ರಾಜ್ಯದ ವಾಸ್ಕೋ ಮೂಲದ ಆಯೀಶ ಅನಂತ ಗಡೇಕರ ಅಪಘಾತಕ್ಕೀಡಾದ ಬೈಕ ಸವಾರ. ಇವರು ಅಂಕೋಲಾ ಕಡೆಯಿಂದ ಕಾರವಾರದ ಕಡೆಗೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ.ತೋಡೂರು ಬಳಿ ಹೆದ್ದಾರಿಯಲ್ಲಿ ಜಾನುವಾರು ಅಡ್ಡ ಬಂದಿದ್ದು ಬೈಕ್ ನಿಯಂತ್ರಿಸಲಾಗದೇ ಡಿಕ್ಕಿ ಹೊಡೆದಿದ್ದಾನೆ.ಇದರಿಂದಾಗಿ ಬೈಕ್ ಸಾಕಷ್ಟು ದೂರ ಜರಿದುಕೊಂಡು ಹೋಗಿದೆ. ಬೈಕಿನಲ್ಲಿ ಸಾಕಷ್ಟು ಪೆಟ್ರೋಲ್ ಇದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ.
ಘಟನೆಯಲ್ಲಿ ಸವಾರ ಬಚಾವಾವಿದ್ದು ಬೈಕ್ ಹೊತ್ತಿ ಉರಿದಿದೆ. ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಗಮನಿಸಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




