ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು 2015ರ ಜನವರಿ 26ರಂದು ಭಾರತಕ್ಕೆ ಭೇಟಿ ನೀಡುವ ಮುನ್ನ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಆರೋಪದಲ್ಲಿ ಭಟ್ಕಳದ ಡಾ.ಸೈಯದ್ ಇಸ್ಮಾಯಿಲ್ ಅಫಾಕ್ ಮತ್ತು ಇತರ ಇಬ್ಬರು ಆರೋಪಿಗಳಾದ ಅಬ್ದುಲ್ ಸಬೂರ್ ಮತ್ತು ಸದ್ದಾಂ ಹುಸೇನ್ ಅವರಿಗೆ ಬೆಂಗಳೂರಿನ ಎನ್ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಇನ್ನೂ ಇಬ್ಬರು ಆರೋಪಿಗಳಾದ ಅಬ್ದುಲ್ ಸಬೂರ್ ಮತ್ತು ಸದ್ದಾಂ ಹುಸೇನ್ ಅವರಿಗೆ 10ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಮೂವರು ಆರೋಪಿಗಳು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವರಾಗಿದ್ದು, ಪಾಕಿಸ್ತಾನದ ಸೂಚನೆಗಳನ್ನು ಪಾಲಿಸುತ್ತಿದ್ದರು ವರದಿಯಾಗಿದೆ. ನ್ಯಾಯಾಲಯವು ಆಫಾಕ್ ಗೆ 1.55 ಲಕ್ಷ ರೂ., ಸಬೂರ್ ಮತ್ತು ಹುಸೇನ್ ಗೆ ತಲಾ 95 ಸಾವಿರ ರೂ. ದಂಡ ವಿಧಿಸಿದೆ.
ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಮೂವರಿಗೆ ಶಿಕ್ಷೆ ವಿಧಿಸಲಾಗಿದೆ.ಆದೇಶವನ್ನು ಹೊರಡಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಂಗಾಧರ ಸಿ.ಎಂ. ಅವರು ನ್ಯಾಯಾಂಗ ಬಂಧನದಲ್ಲಿರುವ ಅಪರಾಧಿಗಳ ಬಂಧನದ ಅವಧಿಯನ್ನು ಸೆಕ್ಷನ್ 428 ಸಿಆರ್ ಪಿಸಿ ಅಡಿಯಲ್ಲಿ ಒದಗಿಸಲಾದ ಜೈಲು ಶಿಕ್ಷೆಯ ಅವಧಿಗೆ ಹೊಂದಿಸಬೇಕು ಮತ್ತು ತಲೆಮರೆಸಿಕೊಂಡಿರುವ ಇತರರ ವಿರುದ್ಧದ ವಿಚಾರಣೆ ಮುಗಿಯುವವರೆಗೆ ಪ್ರಕರಣದ ದಾಖಲೆಗಳು ಅಥವಾ ಆಸ್ತಿಗಳನ್ನು ಸಂರಕ್ಷಿಸಬೇಕು ಎಂದು ಹೇಳಿದರು.
ಆರೋಪಿಗಳು2015ರಲ್ಲಿ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂದಿನ ಸಿಸಿಬಿ ಎಸಿಪಿ ತಮ್ಮಯ್ಯ ಎಂ.ಕೆ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಗಮನಿಸಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




