ಸುದ್ದಿಬಿಂದು ಬ್ಯೂರೋ ವರದಿ (Digital News)
ವಿಜಯಪುರ : ಕುಳಿತ ಸ್ಥಳದಲ್ಲೇ ವ್ಯಕ್ತಿ ಓರ್ವರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ.

ಸಾಹೇಬಗೌಡ ಹೆರಾಣವರ (72) ಎಂಬುವವರೆ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಬಸವನ ಬಾಗೇವಾಡಿ ಪಟ್ಟಣದ ಮಿನಿ ವಿಧಾನ ಸೌಧದ ಎದುರು ಚಿಕ್ಕ ಅಂಗಡಿ ಹಾಕಿಕೊಂಡಿದ್ದರು.ಇವರು ತಹಶೀಲ್ದಾರ ಕಚೇರಿಗೆ ಕೆಲಸದ ನಿಮಿತ್ಯ ಬಂದವರಿಗೆ ಫಾರ್ಮ್ ತುಂಬಿ ಕೊಡುವ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇಂದು ಬೆಳಗೆ ಅಂಗಡಿ ಓಪನ್ ಮಾಡಿ ಚೇರ್ ಮೇಲೆ ಕುಳಿತಾಗಲೇ ಹೃದಯಾಘಾತವಾಗಿ ಸಾವನಪ್ಪಿದ್ದಾರೆ ಎನ್ನಲಾಗಿದೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಬಾಗೇವಾಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

ಗಮನಿಸಿ