ಸುದ್ದಿಬಿಂದು ಬ್ಯೂರೋ ವರದಿ : (Suddibindu (Digital News)
ಬೆಂಗಳೂರು: ಬಿಜೆಪಿಯ ನಾಯಕನ ಎಂಬಾತನ ವಿರುದ್ದ ಮಹಿಳೆ ನೀಡಿದ ದೂರು ಹಿನ್ನೆಲೆಯಲ್ಲಿ, ಬಿಜೆಪಿ ನಾಯಕ ಸೋಮಶೇಖರ್ ಅಲಿಯಾಸ್ ಜಿಮ್ ಸೋಮ ವಿರುದ್ಧ ಬಲಾತ್ಕಾರ ಪ್ರಕರಣ ದಾಖಲಾಗಿದ್ದು. ಪೊಲೀಸರು ಸೋಮಶೇಖರ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ, ದೂರುದಾರ ಮಹಿಳೆ ಮತ್ತು ಸೋಮ ಒಬ್ಬ ಸಾಮಾನ್ಯ ಸ್ನೇಹಿತನ ಮೂಲಕ ಪರಿಚಿತರಾಗಿದ್ದರು. ಮಹಿಳೆಯ ಮದುವೆಗೆ ಆರ್ಥಿಕ ಸಹಾಯ ಮಾಡುವುದಾಗಿ ಸೋಮ ಭರವಸೆ ನೀಡಿದ್ದು. ಕೆಲವು ತಿಂಗಳ ಹಿಂದೆ, ಹಣ ನೀಡುವ ನೆಪದಲ್ಲಿ ಸೋಮಶೇಖರ್ ಮಹಿಳೆಯನ್ನು ಪಿಜೆ ನಿವಾಸದಿಂದ ತನ್ನ ಫ್ಲ್ಯಾಟ್ಗೆ ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಮಹಿಳೆ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದರು, ಅದರಿಂದಾಗಿ ಅವರು ಆರ್ಥಿಕ ಸಹಾಯ ಕೇಳಿದ್ದರು. ಸೋಮಶೇಖರ್ ನಗರದಿಂದ ಪರಾರಿಯಾಗಿರುವ ಶಂಕೆ ಇದ್ದು, ಪೊಲೀಸರು ಅವರ ಪತ್ತೆಗೆ ಶೋಧಿಸುತ್ತಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋಮಶೇಖರ್ ಸ್ಪರ್ಧಿಸಿ ಸೋತ್ತಿದ್ದರು.
ಗಮನಿಸಿ
- ಧರ್ಮಸ್ಥಳ ಪ್ರಕರಣ ಮರುತನಿಖೆಗೆ SIT: ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸರ್ಕಾರ ಆದೇಶ
- ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಸಿಎಂಗೆ ಪತ್ರ ಬರೆದ ದೇಶಪಾಂಡೆ
- ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಲಗೇಜ್ ರಿಕ್ಷಾ ಪಲ್ಟಿ: ಐದಕ್ಕೂ ಹೆಚ್ಚು ಮಂದಿಗೆ ಗಾಯ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ




